ಅಫ್ಗಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಲ್ಲಿನ ಬೆಳವಣಿಗೆಯು ನಮಗೆ ಹೊಸ ಭದ್ರತಾ ಸವಾಲನ್ನು ಉಂಟುಮಾಡಿದೆ. ಭಾರತೀಯರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಭಾರತ ವಿರೋಧಿ ಪಡೆಗಳು ಗಡಿಯಾಚೆಗಿನ ಭಯೋತ್ಪಾದನೆಗಾಗಿ ಅಫ್ಗಾನಿಸ್ತಾನದ ಪರಿಸ್ಥಿತಿಯ ಲಾಭವನ್ನು ಪಡೆಯಲು ನಾವು ಬಯಸುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.