<p class="title"><strong>ನವದೆಹಲಿ :</strong> 12 ಮಂದಿ ಸಂಸದ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ನಡೆಸಿದ ಪ್ರತಿಭಟನೆಯ ನಡುವೆ ರಾಜ್ಯಸಭೆಯ ಕಲಾಪವನ್ನು ಮಂಗಳವಾರದವರೆಗೆ ಮುಂದೂಡಲಾಯಿತು.</p>.<p class="title">ಸೋಮವಾರ ನಾಲ್ಕು ಬಾರಿ ಸದನವನ್ನು ಮುಂದೂಡಲಾಯಿತು. ಸಂಜೆ 4 ಗಂಟೆಗೆ ಸದನ ಆರಂಭವಾಗುತ್ತಿದ್ದಂತೆ 12 ಸದಸ್ಯರ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದು, ಅವರಿಗೂ ಸದನದೊಳಗೆ ಬರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾಪತಿಗಳ ಪೀಠದ ಎದುರು ಗದ್ದಲ ಆರಂಭಿಸಿದರು.</p>.<p class="title">ಗದ್ದಲದ ನಡುವೆಯೇ, ನಾಗಾಲ್ಯಾಂಡ್ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಉಪ ಸಭಾಪತಿ ಹರಿವಂಶ್ ಅವರು ಸೂಚನೆ ನೀಡಿದರು. ನಾಗಾಲ್ಯಾಂಡ್ ಹತ್ಯೆ ಪ್ರಕರಣ ಖಂಡಿಸಿದ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಮುಂದುವರಿಸಿದವು.</p>.<p>ಸಚಿವರು ಹೇಳಿಕೆ ನೀಡುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಹಿಂದೆ ಲೋಕಸಭೆಯಲ್ಲಿ ಶಾ ಇದೇ ಹೇಳಿಕೆ ನೀಡಿದ್ದರು. ಶಾ ಅವರು ಹೇಳಿಕೆಯನ್ನು ಮುಗಿಸಿದ ತಕ್ಷಣ, 12 ಸಂಸದರ ಅಮಾನತು ಕುರಿತು ಪ್ರತಿಪಕ್ಷಗಳ ಸದಸ್ಯರು ಪಟ್ಟುಹಿಡಿದು ಗದ್ದಲವನ್ನು ಮುಂದುವರೆಸಿದ್ದರಿಂದ ಉಪಸಭಾಪತಿಯವರು ಸದನವನ್ನು ದಿನಕ್ಕೆ ಮುಂದೂಡಿದರು.</p>.<p>ಇದಕ್ಕೂ ಮುನ್ನ ಮೂರನೇ ಬಾರಿಗೆ ಸದನವನ್ನು ಮುಂದೂಡಿದ ನಂತರ ಮಧ್ಯಾಹ್ನ 3ಕ್ಕೆ ಸದನದ ಕಾರ್ಯಕಲಾಪ ಆರಂಭವಾಯಿತು. ಸಭಾಪತಿಗಳ ಸ್ಥಾನದಲ್ಲಿದ್ದ ಸುಶ್ಮಿತ್ ಪಾತ್ರಾ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಸೇರಿದಂತೆ ಹಣದುಬ್ಬರದಿಂದ ದೇಶದ ಪರಿಸ್ಥಿತಿ ಕುರಿತು ಅಲ್ಪಾವಧಿಯ ಚರ್ಚೆಗೆ ಅವಕಾಶ ನೀಡಿ, ಈ ವಿಷಯದ ಬಗ್ಗೆ ಮಾತನಾಡುವಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಿದರು.</p>.<p>‘ಪ್ರಜಾಪ್ರಭುತ್ವದಲ್ಲಿ 12 ಸದಸ್ಯರನ್ನು ಅಮಾನತುಗೊಳಿಸಿ ಸದನ ನಡೆಸುವುದು, ಚರ್ಚೆ ಆರಂಭಿಸುವುದು ಅಪರಾಧ. ಆದ್ದರಿಂದ ಮೊದಲು 12 ಸದಸ್ಯರ ಅಮಾನತು ಹಿಂಪಡೆದು ಅವರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು’ ಎಂದು ಸಭಾಪತಿಯವರಲ್ಲಿ ಮನವಿ ಮಾಡಿದರು.</p>.<p>ಆದರೆ, ಈ ಮನವಿಗೆ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ವಿರೋಧ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದರು. ಸದನವನ್ನು ಮುಂದೂಡಿ, ಸಂಜೆ 4ಕ್ಕೆ ಆರಂಭಿಸಿದ ನಂತರವೂ ಗಲಾಟೆ ಮುಂದುವರಿದಿದ್ದರಿಂದ ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ :</strong> 12 ಮಂದಿ ಸಂಸದ ಅಮಾನತು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ನಡೆಸಿದ ಪ್ರತಿಭಟನೆಯ ನಡುವೆ ರಾಜ್ಯಸಭೆಯ ಕಲಾಪವನ್ನು ಮಂಗಳವಾರದವರೆಗೆ ಮುಂದೂಡಲಾಯಿತು.</p>.<p class="title">ಸೋಮವಾರ ನಾಲ್ಕು ಬಾರಿ ಸದನವನ್ನು ಮುಂದೂಡಲಾಯಿತು. ಸಂಜೆ 4 ಗಂಟೆಗೆ ಸದನ ಆರಂಭವಾಗುತ್ತಿದ್ದಂತೆ 12 ಸದಸ್ಯರ ಅಮಾನತು ಆದೇಶವನ್ನು ಹಿಂದಕ್ಕೆ ಪಡೆದು, ಅವರಿಗೂ ಸದನದೊಳಗೆ ಬರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾಪತಿಗಳ ಪೀಠದ ಎದುರು ಗದ್ದಲ ಆರಂಭಿಸಿದರು.</p>.<p class="title">ಗದ್ದಲದ ನಡುವೆಯೇ, ನಾಗಾಲ್ಯಾಂಡ್ ಹತ್ಯೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಉಪ ಸಭಾಪತಿ ಹರಿವಂಶ್ ಅವರು ಸೂಚನೆ ನೀಡಿದರು. ನಾಗಾಲ್ಯಾಂಡ್ ಹತ್ಯೆ ಪ್ರಕರಣ ಖಂಡಿಸಿದ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಮುಂದುವರಿಸಿದವು.</p>.<p>ಸಚಿವರು ಹೇಳಿಕೆ ನೀಡುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಹಿಂದೆ ಲೋಕಸಭೆಯಲ್ಲಿ ಶಾ ಇದೇ ಹೇಳಿಕೆ ನೀಡಿದ್ದರು. ಶಾ ಅವರು ಹೇಳಿಕೆಯನ್ನು ಮುಗಿಸಿದ ತಕ್ಷಣ, 12 ಸಂಸದರ ಅಮಾನತು ಕುರಿತು ಪ್ರತಿಪಕ್ಷಗಳ ಸದಸ್ಯರು ಪಟ್ಟುಹಿಡಿದು ಗದ್ದಲವನ್ನು ಮುಂದುವರೆಸಿದ್ದರಿಂದ ಉಪಸಭಾಪತಿಯವರು ಸದನವನ್ನು ದಿನಕ್ಕೆ ಮುಂದೂಡಿದರು.</p>.<p>ಇದಕ್ಕೂ ಮುನ್ನ ಮೂರನೇ ಬಾರಿಗೆ ಸದನವನ್ನು ಮುಂದೂಡಿದ ನಂತರ ಮಧ್ಯಾಹ್ನ 3ಕ್ಕೆ ಸದನದ ಕಾರ್ಯಕಲಾಪ ಆರಂಭವಾಯಿತು. ಸಭಾಪತಿಗಳ ಸ್ಥಾನದಲ್ಲಿದ್ದ ಸುಶ್ಮಿತ್ ಪಾತ್ರಾ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಸೇರಿದಂತೆ ಹಣದುಬ್ಬರದಿಂದ ದೇಶದ ಪರಿಸ್ಥಿತಿ ಕುರಿತು ಅಲ್ಪಾವಧಿಯ ಚರ್ಚೆಗೆ ಅವಕಾಶ ನೀಡಿ, ಈ ವಿಷಯದ ಬಗ್ಗೆ ಮಾತನಾಡುವಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಿದರು.</p>.<p>‘ಪ್ರಜಾಪ್ರಭುತ್ವದಲ್ಲಿ 12 ಸದಸ್ಯರನ್ನು ಅಮಾನತುಗೊಳಿಸಿ ಸದನ ನಡೆಸುವುದು, ಚರ್ಚೆ ಆರಂಭಿಸುವುದು ಅಪರಾಧ. ಆದ್ದರಿಂದ ಮೊದಲು 12 ಸದಸ್ಯರ ಅಮಾನತು ಹಿಂಪಡೆದು ಅವರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡಬೇಕು’ ಎಂದು ಸಭಾಪತಿಯವರಲ್ಲಿ ಮನವಿ ಮಾಡಿದರು.</p>.<p>ಆದರೆ, ಈ ಮನವಿಗೆ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ವಿರೋಧ ಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದರು. ಸದನವನ್ನು ಮುಂದೂಡಿ, ಸಂಜೆ 4ಕ್ಕೆ ಆರಂಭಿಸಿದ ನಂತರವೂ ಗಲಾಟೆ ಮುಂದುವರಿದಿದ್ದರಿಂದ ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>