ಇದಕ್ಕೂ ಮುನ್ನ ಮೂರನೇ ಬಾರಿಗೆ ಸದನವನ್ನು ಮುಂದೂಡಿದ ನಂತರ ಮಧ್ಯಾಹ್ನ 3ಕ್ಕೆ ಸದನದ ಕಾರ್ಯಕಲಾಪ ಆರಂಭವಾಯಿತು. ಸಭಾಪತಿಗಳ ಸ್ಥಾನದಲ್ಲಿದ್ದ ಸುಶ್ಮಿತ್ ಪಾತ್ರಾ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಸೇರಿದಂತೆ ಹಣದುಬ್ಬರದಿಂದ ದೇಶದ ಪರಿಸ್ಥಿತಿ ಕುರಿತು ಅಲ್ಪಾವಧಿಯ ಚರ್ಚೆಗೆ ಅವಕಾಶ ನೀಡಿ, ಈ ವಿಷಯದ ಬಗ್ಗೆ ಮಾತನಾಡುವಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಿದರು.