ಮಧ್ಯಾಹ್ನ 12 ಗಂಟೆಗೆ ಸದನ ಪುನಃ ಆರಂಭವಾಯಿತು. ಸಭಾಧ್ಯಕ್ಷರ ಪೀಠದಲ್ಲಿ ಕುಳಿತಿದ್ದ ಸಂಸದರಾದ ಭುವನೇಶ್ವರ ಖಲಿತಾ, ಅಮಾನತುಗೊಂಡಿರುವ ಸದಸ್ಯರನ್ನು ಸದನದಿಂದ ಹೊರ ನಡೆಯುವಂತೆ ಸೂಚಿಸಿ, ಸದನದಲ್ಲಿ ಕೋರಂ ಇರುವಂತೆ ನೋಡಿಕೊಳ್ಳಲು ಉಳಿದ ಸದಸ್ಯರಿಗೆ ತಿಳಿಸಿದರು. ಸದನವನ್ನು ಒಂದು ದಿನ ಮುಂದೂಡುವುದಕ್ಕೂ ವಿರೋಧಪಕ್ಷದ ಸದಸದ್ಯರು ಆಕ್ಷೇಪ ವ್ಯಕ್ತಪಡಿಸಿದರು.