ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳ ಸಂಸದರು ಗದ್ದಲ ನಡೆಸಿದರು. ಅದಾನಿ ಸಮೂಹದ ವಿರುದ್ಧದ ಪ್ರಕರಣವನ್ನು ಜೆಪಿಸಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಕಾಂಗ್ರೆಸ್ ಸಂಸದೆ ರಜನಿ ಪಾಟೀಲ್ ಮೇಲೆ ಹೇರಲಾಗಿರುವ ಅಮಾನತು ಆದೇಶ ರದ್ದುಪಡಿಸುವಂತೆಯೂ ಆಗ್ರಹಿಸಿದರು. ಹೀಗಾಗಿ ಸಭಾಪತಿ ಜಗದೀಪ್ ಧನಕರ್ ಅವರು ಕೆಲ ಕಾಲ ಕಲಾಪ ಮುಂದೂಡಿದರು.