ಡಿಸೆಂಬರ್ 1ರಂದು ಉಪಚುನಾವಣೆ ನಿಗದಿಯಾಗಿದ್ದು, ನಾಮಪತ್ರ ಸಲ್ಲಿಸಲು ನವೆಂಬರ್ 18 (ಬುಧವಾರ) ಕೊನೆಯ ದಿನವಾಗಿದೆ. ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಈ ಆಯ್ಕೆ ನಡೆಯಲಿದ್ದು, ಬಿಜೆಪಿಗೆ ಪೂರ್ಣ ಬಹುಮತ
ಇರುವ ಕಾರಣ ನಾರಾಯಣ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ದೇವಾಂಗ ಸಮುದಾಯದ ನಾರಾಯಣ ಮಂಗಳೂರು ಮೂಲದದವರು. ಬೆಂಗಳೂರಿನಲ್ಲಿ ಪ್ರಮುಖ ಪ್ರಕಾಶನ ಸಂಸ್ಥೆ (ಸ್ಪ್ಯಾನ್ ಪ್ರಿಂಟ್) ಹೊಂದಿದ್ದಾರೆ. ಬಹು ಬಣ್ಣದ ಮುದ್ರಣ (ಮಲ್ಟಿ ಕಲರ್ ಪ್ರಿಂಟಿಂಗ್) ತಂತ್ರಜ್ಞಾನವನ್ನು 1982ರಲ್ಲಿ ಮೊದಲ ಬಾರಿಗೆ ಬೆಂಗಳೂರಿಗೆ ಪರಿಚಯಿಸಿದ್ದರು.