ಮಹಾರಾಷ್ಟ್ರದ ಆರು ಮತ್ತು ಹರಿಯಾಣದ ಎರಡು ಸ್ಥಾನಗಳಿಗೂ ಚುನಾವಣೆ ನಡೆದಿದೆ. ಆದರೆ, ಮತದಾನದ ನಿಯಮ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದ ಕಾರಣ ಎರಡೂ ರಾಜ್ಯಗಳಲ್ಲಿ ಮತ ಎಣಿಕೆಯನ್ನು ನಿಲ್ಲಿಸಲಾಗಿದೆ. ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ ಆಘಾಡಿಯ ಮೂವರು ಶಾಸಕರು ಮತಪತ್ರಗಳನ್ನು ಏಜೆಂಟರಿಗೆ ತೋರಿಸುವ ಬದಲು ಅವರ ಕೈಗೆ ಕೊಟ್ಟಿದ್ದಾರೆ. ಹಾಗಾಗಿ, ಅವರ ಮತಗಳನ್ನು ಅಸಿಂಧುಗೊಳಿಸಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.