ನವದೆಹಲಿ: ‘ದೈನಿಕ್ ಭಾಸ್ಕರ್‘ ಪತ್ರಿಕಾ ಸಮೂಹ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿ ವಿಚಾರ ಮತ್ತು ಪೆಗಾಸಸ್ ಗೂಢಚಾರಿಕೆ ಪ್ರಕರಣದ ಕುರಿತು ಚರ್ಚೆ ನಡೆಸುವಂತೆ ಒತ್ತಾಯಿಸಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿ, ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ, ಸಂಸತ್ತಿನ ಕಲಾಪವನ್ನು 2ಗಂಟೆಗೆ ಮುಂದೂಡಲಾಯಿತು.