ಆದರೆ ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಇದಕ್ಕೆ ಒಪ್ಪಲಿಲ್ಲ. ‘ಸ್ವಾಧೀನಪಡಿಸುವ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ಅಥವಾ ಬಜೆಟ್ ಚರ್ಚೆಯ ವೇಳೆ ಇಂಧನ ಬೆಲೆ ಏರಿಕೆ ವಿಷಯವನ್ನು ಚರ್ಚಿಸಬಹುದು’ ಎಂದು ಅಧ್ಯಕ್ಷರು ಹೇಳಿದ್ದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಹೀಗಾಗಿ ಗದ್ದಲ ನಡೆಸಿದ್ದರಿಂಂದ ಇಡೀ ದಿನದ ಕಲಾಪಕ್ಕೆ ಅಡ್ಡಿ ಉಂಟಾಯಿತು.