ಎರಡು ಬಾರಿ ಮಾತ್ರ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ್ದನ್ನು ಬಿಟ್ಟರೆ, ಈ ಬಾರಿಯ ಕಲಾಪಕ್ಕೆ ಅಡ್ಡಿಯುಂಟಾಗಲಿಲ್ಲ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ಕಾಂಗ್ರೆಸ್ ಸದಸ್ಯರು, ನೀಟ್ ವಿಷಯವಾಗಿ ಕೆಲ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ್ದರು. ಆಂಧ್ರಪ್ರದೇಶದ ವಿಭಜನೆಯನ್ನು ಪ್ರಸ್ತಾಪಿಸಿದ ಪ್ರಧಾನಿ ವಿರುದ್ಧ ಟಿಆರ್ಎಸ್ ಸಂಸದರು ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಇದಕ್ಕೆ ಅವಕಾಶ ಸಿಗದಿದ್ದಾಗ, ಸಭಾಪತಿ ಪೀಠದ ಮುಂದೆ ಪ್ರತಿಭಟಿಸಿ, ನಂತರ ಸಭಾತ್ಯಾಗ ಮಾಡಿದ್ದರು.