ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಅವರು, 'ಕ್ಯಾಪ್ಟನ್ (ಮುಖ್ಯಮಂತ್ರಿ ಅಮರಿಂದರ್ ಸಿಂಗ್) ವಿರುದ್ಧ ನಿರಂತರ ವಾಗ್ದಾಳಿ ನಡೆಸುವ ಸಿಧು ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ. ಆದ್ದರಿಂದ, ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಿಧು ಪಂಜಾಬ್ ರಾಜಕೀಯದ ರಾಖಿ ಸಾವಂತ್' ಎಂದು ಚಡ್ಡಾ ಟ್ವೀಟ್ ಮಾಡಿದ್ದಾರೆ.