ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಮತಾಂತರದ ಗುರಿಯನ್ನು ಹೊಂದಿರುವ ಸಂಘಟನೆಗಳಿಗೆ ಪೂರೈಕೆಯಾಗುತ್ತಿರುವ ವಿದೇಶಿ ದೇಣಿಗೆಗೆ ನರೇಂದ್ರ ಮೋದಿ ಸರ್ಕಾರವು ಕಡಿವಾಣ ಹಾಕಿದೆ ಎಂದು ರವೀಂದ್ರ ನರೈನ್ ಸಿಂಗ್ ಕೊಂಡಾಡಿದರು. ಅಲ್ಲದೆ, ರಾಷ್ಟ್ರ ನಿರ್ಮಾಣದಲ್ಲಿ ಹಿಂದೂಗಳೊಂದಿಗೆ ಕೈಜೋಡಿಸುವಂತೆ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದರು.