ಪುಣೆ: ‘ರಾಮಮಂದಿರವು ಅಯೋಧ್ಯೆಯನ್ನು ವಿಶ್ವದ ಸಾಂಸ್ಕೃತಿಕ ರಾಜಧಾನಿಯನ್ನಾಗಿ ಮಾಡಲಿದೆ’ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿಜಿ ಮಹಾರಾಜ ಗುರುವಾರ ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ಜ.15ರಂದು ರಾಷ್ಟ್ರಮಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
‘ನಾಲ್ಕು ಲಕ್ಷ ಹಳ್ಳಿಗಳಲ್ಲಿನ 11 ಕೋಟಿ ಕುಟುಂಬವನ್ನು ತಲುಪುವ ಗುರಿ ಇದೆ. ₹1,000, ₹100 ಹಾಗೂ ₹10ರ ಕೂಪನ್ ನೀಡಿ ನಿಧಿ ಸಂಗ್ರಹಿಸಲಾಗುವುದು. ಈ ಹಣವನ್ನು ತಕ್ಷಣವೇ ಟ್ರಸ್ಟ್ನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು’ ಎಂದರು.