<p>ನವದೆಹಲಿ: ಕರ್ನಾಟಕದ ಬಳ್ಳಾರಿಯ ಅಂಕಸಮುದ್ರ, ಗದಗ ಜಿಲ್ಲೆಯ ಮಾಗಡಿ ಕೆರೆ ಹಾಗೂ ಉತ್ತರ ಕನ್ನಡದ ಅಘನಾಶಿನಿ ಜೌಗು ಪ್ರದೇಶಗಳನ್ನು ರಾಮ್ಸಾರ್ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದೆ.</p>.<p>ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ 10 ಜೌಗು ಪ್ರದೇಶಗಳನ್ನು ರಾಮ್ಸಾರ್ ಪಟ್ಟಿಗೆ ಆಗಸ್ಟ್ನಲ್ಲಿ ಸೇರ್ಪಡೆ ಮಾಡಲಾಗಿತ್ತು. ಈ ಮೂಲಕ ಈ ಜೌಗು ಪ್ರದೇಶಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ಸಿಕ್ಕಿತ್ತು.</p>.<p>ಲೋಕಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಸೋಮವಾರ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಪರಿಸರ ಖಾತೆಯ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಅವರು, ‘ಸಂರಕ್ಷಿತ ಪ್ರದೇಶಗಳ ಅಭಿವೃದ್ಧಿ ಆಯಾ ರಾಜ್ಯಗಳ<br />ಜವಾಬ್ದಾರಿ. ಆದರೂ, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಸಂರಕ್ಷಿತ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ವಿಶೇಷ ಯೋಜನೆಯಡಿ ಅನುದಾನ ನೀಡುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ರಂಗನತಿಟ್ಟು ಪಕ್ಷಿಧಾಮದಲ್ಲಿ 188 ಪ್ರಭೇದದ ಮರಗಳು, 225 ಪ್ರಭೇದದ ಪಕ್ಷಿಗಳು, 69 ಜಾತಿಯ ಮೀನುಗಳು, 13 ಪ್ರಭೇದದ ಕಪ್ಪೆಗಳು ಹಾಗೂ 30 ಪ್ರಭೇದದ ಚಿಟ್ಟೆಗಳು ಇವೆ. ಇದು ಭಾರತದ ಪ್ರಮುಖ ಪಕ್ಷಿಧಾಮ ಎಂದು ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ಈ ಹಿಂದೆ ಗುರುತಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಕರ್ನಾಟಕದ ಬಳ್ಳಾರಿಯ ಅಂಕಸಮುದ್ರ, ಗದಗ ಜಿಲ್ಲೆಯ ಮಾಗಡಿ ಕೆರೆ ಹಾಗೂ ಉತ್ತರ ಕನ್ನಡದ ಅಘನಾಶಿನಿ ಜೌಗು ಪ್ರದೇಶಗಳನ್ನು ರಾಮ್ಸಾರ್ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದೆ.</p>.<p>ಕರ್ನಾಟಕದ ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ 10 ಜೌಗು ಪ್ರದೇಶಗಳನ್ನು ರಾಮ್ಸಾರ್ ಪಟ್ಟಿಗೆ ಆಗಸ್ಟ್ನಲ್ಲಿ ಸೇರ್ಪಡೆ ಮಾಡಲಾಗಿತ್ತು. ಈ ಮೂಲಕ ಈ ಜೌಗು ಪ್ರದೇಶಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ಸಿಕ್ಕಿತ್ತು.</p>.<p>ಲೋಕಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಸೋಮವಾರ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಪರಿಸರ ಖಾತೆಯ ರಾಜ್ಯ ಸಚಿವ ಅಶ್ವಿನ್ ಕುಮಾರ್ ಚೌಬೆ ಅವರು, ‘ಸಂರಕ್ಷಿತ ಪ್ರದೇಶಗಳ ಅಭಿವೃದ್ಧಿ ಆಯಾ ರಾಜ್ಯಗಳ<br />ಜವಾಬ್ದಾರಿ. ಆದರೂ, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಸಂರಕ್ಷಿತ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ವಿಶೇಷ ಯೋಜನೆಯಡಿ ಅನುದಾನ ನೀಡುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ರಂಗನತಿಟ್ಟು ಪಕ್ಷಿಧಾಮದಲ್ಲಿ 188 ಪ್ರಭೇದದ ಮರಗಳು, 225 ಪ್ರಭೇದದ ಪಕ್ಷಿಗಳು, 69 ಜಾತಿಯ ಮೀನುಗಳು, 13 ಪ್ರಭೇದದ ಕಪ್ಪೆಗಳು ಹಾಗೂ 30 ಪ್ರಭೇದದ ಚಿಟ್ಟೆಗಳು ಇವೆ. ಇದು ಭಾರತದ ಪ್ರಮುಖ ಪಕ್ಷಿಧಾಮ ಎಂದು ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ಈ ಹಿಂದೆ ಗುರುತಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>