ದೆಹಲಿಯ ಕನ್ನಾಟ್ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಭಾರಿ ಸಂಖ್ಯೆಯ ಬೆಂಬಲಿಗರೊಂದಿಗೆ ಬಂದಿದ್ದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಂದ ಮಹಾರಾಷ್ಟ್ರಕ್ಕೆ ದೊಡ್ಡ ಅಪಾಯ ಇದೆ. ರಾಜ್ಯವನ್ನು ಅವರಿಂದ ಮುಕ್ತಗೊಳಿಸುವಂತೆ ಪ್ರಾರ್ಥನೆ ಸಲ್ಲಿಸಿದ್ದಾಗಿ ನವನೀತ್ ರಾಣಾ ದೇವಸ್ಥಾನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.