<p><strong>ಕೇಂದ್ರಪುರ</strong>: ‘ಒಡಿಶಾದ ಕೇಂದ್ರಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ಏಳು ವರ್ಷದ ಬಳಿಕ ಸಿಕ್ಕಿ ಬಿದ್ದಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘2014ರಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆರೋಪಿಯು ಬೆಂಗಳೂರಿಗೆ ಓಡಿಹೋಗಿದ್ದ. ಅಲ್ಲಿ ಆತ ಪ್ಲಂಬರ್ ವೃತ್ತಿಯಲ್ಲಿ ತೊಡಗಿದ್ದ’ ಎಂದು ಅಧಿಕಾರಿಗಳು ಸೋಮವಾರ ಹೇಳಿದರು.</p>.<p>‘ಆರೋಪಿಯನ್ನು ಬೆಂಗಳೂರಲ್ಲಿ ಭಾನುವಾರ ಬಂಧಿಸಿ, ಸೋಮವಾರ ಇಲ್ಲಿಗೆ ಕರೆತರಲಾಯಿತು. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪಟ್ಟಮುಂಡೈ ಪೊಲೀಸ್ ಠಾಣೆಯ ಅಧಿಕಾರಿ ರಾಕೇಶ್ ತ್ರಿಪಾಠಿ ಮಾಹಿತಿ ನೀಡಿದರು.</p>.<p>‘ಪಟ್ಟಮುಂಡೈ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ನೇತೃತ್ವದ ತಂಡವು ಏಳು ವರ್ಷದ ಬಳಿಕ ಆರೋಪಿಯನ್ನು ಬಂಧಿಸಿದೆ.ಇದೊಂದು ಮಹತ್ತರ ಸಾಧನೆ’ ಎಂದು ಕೇಂದ್ರಪುರ ಪೊಲೀಸ್ ವಿಭಾಗವು ಟ್ವೀಟ್ ಮಾಡಿದೆ.</p>.<p>‘ಈ ಪ್ರಕರಣದಡಿ 2019ರಲ್ಲಿಯೂ ಒಬ್ಬ ಆರೋಪಿಯನ್ನು ನವದೆಹಲಿಯಲ್ಲಿ ಬಂಧಿಸಲಾಗಿತ್ತು. 2015ರಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇಂದ್ರಪುರ</strong>: ‘ಒಡಿಶಾದ ಕೇಂದ್ರಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ಏಳು ವರ್ಷದ ಬಳಿಕ ಸಿಕ್ಕಿ ಬಿದ್ದಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘2014ರಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆರೋಪಿಯು ಬೆಂಗಳೂರಿಗೆ ಓಡಿಹೋಗಿದ್ದ. ಅಲ್ಲಿ ಆತ ಪ್ಲಂಬರ್ ವೃತ್ತಿಯಲ್ಲಿ ತೊಡಗಿದ್ದ’ ಎಂದು ಅಧಿಕಾರಿಗಳು ಸೋಮವಾರ ಹೇಳಿದರು.</p>.<p>‘ಆರೋಪಿಯನ್ನು ಬೆಂಗಳೂರಲ್ಲಿ ಭಾನುವಾರ ಬಂಧಿಸಿ, ಸೋಮವಾರ ಇಲ್ಲಿಗೆ ಕರೆತರಲಾಯಿತು. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪಟ್ಟಮುಂಡೈ ಪೊಲೀಸ್ ಠಾಣೆಯ ಅಧಿಕಾರಿ ರಾಕೇಶ್ ತ್ರಿಪಾಠಿ ಮಾಹಿತಿ ನೀಡಿದರು.</p>.<p>‘ಪಟ್ಟಮುಂಡೈ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ನೇತೃತ್ವದ ತಂಡವು ಏಳು ವರ್ಷದ ಬಳಿಕ ಆರೋಪಿಯನ್ನು ಬಂಧಿಸಿದೆ.ಇದೊಂದು ಮಹತ್ತರ ಸಾಧನೆ’ ಎಂದು ಕೇಂದ್ರಪುರ ಪೊಲೀಸ್ ವಿಭಾಗವು ಟ್ವೀಟ್ ಮಾಡಿದೆ.</p>.<p>‘ಈ ಪ್ರಕರಣದಡಿ 2019ರಲ್ಲಿಯೂ ಒಬ್ಬ ಆರೋಪಿಯನ್ನು ನವದೆಹಲಿಯಲ್ಲಿ ಬಂಧಿಸಲಾಗಿತ್ತು. 2015ರಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>