ಉತ್ತರ ಪ್ರದೇಶದ ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಪ್ರಜಾಪತಿ ಸಚಿವರಾಗಿದ್ದರು. ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೂ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಕೆ.ರಾಯ್, ಬುಧವಾರ ಮೂವರನ್ನೂ ದೋಷಿಗಳು ಎಂದು ತೀರ್ಪು ನೀಡಿದ್ದರು. ಆದರೆ, ಸಾಕ್ಷ್ಯಾಧಾರ ಕೊರತೆಯ ಕಾರಣದಿಂದಾಗಿ ಆರೋಪಿಗಳಾದ ವಿಕಾಸ್ ವರ್ಮಾ, ರೂಪೇಶ್ವರ್, ಅಮರೇಂದ್ರ ಸಿಂಗ್ ಅಲಿಯಾಸ್ ಪಿಂಟು ಹಾಗೂ ಚಂದ್ರಪಾಲ್ ಅವರನ್ನು ಕೋರ್ಟ್ ಖುಲಾಸೆ ಗೊಳಿಸಿದೆ.