‘ಮಾವಿನ ತೋಟ ಕಾಯಲು ಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಮಹಿಳೆಯು ಆಗಸ್ಟ್ 15ರಂದು ದೂರು ನೀಡಿದ್ದರು. ಆರೋಪಿಯನ್ನು ಅಂದೇ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಅಂದಿನಿಂದಲೂ ಆರೋಪಿಯ ಸಂಬಂಧಿಕರು ದೂರು ಹಿಂತೆಗೆದುಕೊಳ್ಳುವಂತೆ ಸಂತ್ರಸ್ತೆಗೆ ಪೀಡಿಸುತ್ತಿದ್ದರು. ಸೋಮವಾರವೂ ಆರೋಪಿಯ ಚಿಕ್ಕಪ್ಪ ಮತ್ತು ಗೆಳೆಯನೊಬ್ಬ ಮಹಿಳೆಯ ಮೇಲೆ ಒತ್ತಡ ಹೇರಿದ್ದರು. ಇದರಿಂದ ಬೇಸತ್ತು ಮಹಿಳೆಯು ಆತ್ಮಹತ್ಯೆಗೆ ಮುಂದಾಗಿದ್ದಾರೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.