ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೊರೊನಾ ನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಆದಿತ್ಯನಾಥ್, ‘ಭಾರತ ಮೊದಲ ಬಾರಿಗೆ ಲಾಕ್ಡೌನ್ಗೆ ಸಾಕ್ಷಿಯಾಗಬೇಕಾಯಿತು. ಪ್ರಧಾನಿ ಅವರ ನಾಯಕತ್ವದಲ್ಲಿ ದೇಶವು ಶಿಸ್ತು ಪಾಲಿಸುವಂತಾಯಿತು. ಅಮೆರಿಕ ಮತ್ತು ಯುರೋಪಿನ ಇತರ ರಾಷ್ಟ್ರಗಳಲ್ಲಿ ಭಾರತಕ್ಕಿಂತ ಉತ್ತಮ ಆರೋಗ್ಯ ಸೌಕರ್ಯವಿದ್ದರೂ ಅಲ್ಲಿ ಪ್ರಾಣಹಾನಿ ಹೆಚ್ಚಾಗಿದೆ. ಆದರೆ, ಭಾರತದಲ್ಲಿ ಪ್ರಧಾನಿ ಅವರ ಸಮಯೋಚಿತ ನಿರ್ಧಾರ ಮತ್ತು ಅವರು ರೂಪಿಸಿದ ಕೊರೊನಾ ನೀತಿಯು ಜೀವಗಳನ್ನು ಉಳಿಸುವಲ್ಲಿ ನೆರವಾಯಿತು’ ಎಂದರು.