ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ| ದ್ರೌಪದಿ ಮುರ್ಮು ಉತ್ತಮ ಅಭ್ಯರ್ಥಿ: ದೇವೇಗೌಡ

Last Updated 22 ಜೂನ್ 2022, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯ ನ್ನಾಗಿ ಆದಿವಾಸಿ ಸಮುದಾಯದ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಕಣಕ್ಕಿಳಿಸಿದೆ. ದ್ರೌಪದಿ ಒಬ್ಬ ಉತ್ತಮ ಅಭ್ಯರ್ಥಿ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನೇಕ ಹೆಸರುಗಳು ಚರ್ಚೆಗೆ ಬಂದು ಅಂತಿಮವಾಗಿ ದ್ರೌಪದಿ ಅವರನ್ನು ಆಯ್ಕೆ ಮಾಡಿದ್ದಾರೆ. ಯಾವುದೇ ವಿವಾದಗಳಿಲ್ಲದ ಅಭ್ಯರ್ಥಿ ಎಂದು ಹೇಳಿದರು.

‘ವಿರೋಧ ಪಕ್ಷಗಳ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಬಗ್ಗೆ ಮಮತಾ ಬ್ಯಾನರ್ಜಿ ಕರೆದ ಮೊದಲ ಸಭೆಗೆ ಹೋಗಿದ್ದೆ’ ಎಂದು ಅವರು ಹೇಳಿದರು. ಯಶವಂತ ಸಿನ್ಹಾ ಮತ್ತು ದ್ರೌಪದಿ ಅವರಲ್ಲಿ ಯಾರಿಗೆ ಬೆಂಬಲ ನೀಡುತ್ತೀರಿ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT