ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ 15ರಂದು ನವದೆಹಲಿಯಲ್ಲಿ ಪ್ರತಿಪಕ್ಷಗಳ 22 ನಾಯಕರ ಸಭೆ ಕರೆದ ಬೆನ್ನಲ್ಲೇ, ಕಾಂಗ್ರೆಸ್ ಕೂಡಾ, ಭಿನ್ನಾಭಿಪ್ರಾಯ ತೊರೆದು ಮುಕ್ತ ಮನಸಿನಿಂದ ಚರ್ಚೆಗೆ ಬರುವಂತೆ ಪ್ರತಿಪಕ್ಷಗಳನ್ನು ಆಹ್ವಾನಿಸಿದೆ.