ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರಪತ್ನಿ’ ವಿವಾದ | ಸೋನಿಯಾ ವಿರುದ್ಧ ಟೀಕೆ: ಕಡತದಿಂದ ಕೈಬಿಡಲು ಆಗ್ರಹ

Last Updated 30 ಜುಲೈ 2022, 2:51 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕುರಿತು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಪೀಯೂಷ್‌ ಗೋಯಲ್ ಅವರು ಆಡಿರುವ ಮಾತುಗಳನ್ನು ಕಡತದಿಂದ ತೆಗೆಯಬೇಕು ಎಂದು ಕೋರಿ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಭಾಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಸದನದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇಬ್ಬರೂ ಸಚಿವರು ಕ್ಷಮೆ ಕೇಳಬೇಕು ಎಂದೂ ಖರ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ನಾಯಕ ಅಧೀರ್ ರಂಜನ್‌ ಚೌಧರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆಗೆ ಸಂಬಂಧಿಸಿ ಇಬ್ಬರೂ ಸಚಿವರು ಸೋನಿಯಾ ವಿರುದ್ಧ ಹರಿಹಾಯ್ದಿದ್ದರು.

ನಿಯಮದ ಪ್ರಕಾರ, ಸದನದ ಸದಸ್ಯರಲ್ಲದ, ಅನ್ಯ ಸದನದ ಸದಸ್ಯರ ವಿರುದ್ಧ ಗಂಭೀರ ಹೇಳಿಕೆ ನೀಡುವಂತಿಲ್ಲ ಎಂದು ಹೇಳಿರುವ ಖರ್ಗೆ, ಪೂರಕವಾಗಿ ರಾಜ್ಯಸಭೆಯ ಮಾಜಿ ಸಭಾಪತಿ ಆರ್‌.ವೆಂಕಟರಾಮನ್‌ 1987ರಲ್ಲಿ ನೀಡಿದ್ದ ರೂಲಿಂಗ್‌ ಉಲ್ಲೇಖಿಸಿದ್ದಾರೆ. ಬೇರೊಂದು ಸದನದ ಸದಸ್ಯರ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT