<p><strong>ಬೆಂಗಳೂರು</strong>: ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗುವ ‘ತಪಸ್’ (ವಿದ್ಯಾರ್ಥಿಗಳಿಗೆ) ಹಾಗೂ ‘ಸಾಧನಾ’ (ವಿದ್ಯಾರ್ಥಿನಿಯರಿಗೆ) ಯೋಜನೆಗಳಡಿ ರಾಷ್ಟ್ರೋತ್ಥಾನ ಪರಿಷತ್ ಅರ್ಜಿ ಆಹ್ವಾನಿಸಿದೆ</p>.<p>‘ತಪಸ್’ ಯೋಜನೆಯಡಿ ಗಂಡು ಮಕ್ಕಳಿಗೆ ಪಿಯುಸಿ ಹಾಗೂ ಐಐಟಿ-ಜೆಇಇ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ‘ಸಾಧನಾ’ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಪಿಯುಸಿ ಜತೆಗೆ ಎನ್ಇಇಟಿ, ಸಿಇಟಿ, ಕೆವಿಪಿವೈ ಮುಂತಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.</p>.<p>ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸ್ತುತ 10ನೇ ತರಗತಿ ಓದುತ್ತಿರುವವರಾಗಿರಬೇಕು. 9ನೇ ತರಗತಿಯಲ್ಲಿ ಶೇ 80ಕ್ಕೂ ಅಧಿಕ ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 2 ಲಕ್ಷ ಮೀರಿರಬಾರದು. ಅರ್ಜಿಗಳನ್ನು <a href="http://www.tapassaadhana.org/" target="_blank">www.tapassaadhana.org</a>ನಲ್ಲಿ 2021 ಜ.10ರೊಳಗೆ ಸಲ್ಲಿಸಬೇಕು. ಜ.31ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬಳಿಕ ಸಂದರ್ಶನ ನಡೆಯಲಿದೆ.</p>.<p><strong>ಸಂಪರ್ಕ:</strong> 9481201144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗುವ ‘ತಪಸ್’ (ವಿದ್ಯಾರ್ಥಿಗಳಿಗೆ) ಹಾಗೂ ‘ಸಾಧನಾ’ (ವಿದ್ಯಾರ್ಥಿನಿಯರಿಗೆ) ಯೋಜನೆಗಳಡಿ ರಾಷ್ಟ್ರೋತ್ಥಾನ ಪರಿಷತ್ ಅರ್ಜಿ ಆಹ್ವಾನಿಸಿದೆ</p>.<p>‘ತಪಸ್’ ಯೋಜನೆಯಡಿ ಗಂಡು ಮಕ್ಕಳಿಗೆ ಪಿಯುಸಿ ಹಾಗೂ ಐಐಟಿ-ಜೆಇಇ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ‘ಸಾಧನಾ’ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಪಿಯುಸಿ ಜತೆಗೆ ಎನ್ಇಇಟಿ, ಸಿಇಟಿ, ಕೆವಿಪಿವೈ ಮುಂತಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.</p>.<p>ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಸ್ತುತ 10ನೇ ತರಗತಿ ಓದುತ್ತಿರುವವರಾಗಿರಬೇಕು. 9ನೇ ತರಗತಿಯಲ್ಲಿ ಶೇ 80ಕ್ಕೂ ಅಧಿಕ ಅಂಕ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ₹ 2 ಲಕ್ಷ ಮೀರಿರಬಾರದು. ಅರ್ಜಿಗಳನ್ನು <a href="http://www.tapassaadhana.org/" target="_blank">www.tapassaadhana.org</a>ನಲ್ಲಿ 2021 ಜ.10ರೊಳಗೆ ಸಲ್ಲಿಸಬೇಕು. ಜ.31ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬಳಿಕ ಸಂದರ್ಶನ ನಡೆಯಲಿದೆ.</p>.<p><strong>ಸಂಪರ್ಕ:</strong> 9481201144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>