ನವದೆಹಲಿ: ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ.
ನನಗೆ ಕೋವಿಡ್–19 ಸೋಂಕು ಭಾನುವಾರ ದೃಢಪಟ್ಟಿದ್ದು ನಾನು ಆರೋಗ್ಯವಾಗಿದ್ದೇನೆ ಎಂದು ಶಕ್ತಿಕಾಂತ ದಾಸ್ ಟ್ವೀಟ್ ಮಾಡಿದ್ದಾರೆ.
ಹೋಮ್ ಕ್ವಾರಂಟೈನ್ ಮೂಲಕ ಕಚೇರಿ ಕೆಲಸಗಳನ್ನು ಮುಂದುವರೆಸಿವೆ. ದೂರವಾಣಿ ಹಾಗೂ ವಿಡಿಯೊ ಕಾಲಿಂಗ್ ಮೂಲಕ ಅಧಿಕಾರಿಗಳ ಸಂಪರ್ಕದಲ್ಲಿ ಇದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಭಾರತದಲ್ಲಿಕಳೆದ 24 ಗಂಟೆಗಳ ಅವಧಿಯಲ್ಲಿ 55,000 ಹೊಸ ಪ್ರಕರಣಗಳು ದಾಖಲಾಗಿದ್ದು ಒಂದೇ ದಿನ 578
ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.