<p><strong>ಕೋಲ್ಕತ್ತ:</strong> ‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.</p>.<p>‘ದೇಶದೆಲ್ಲೆಡೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಪಶ್ಚಿಮ ಬಂಗಾಳ ಸರ್ಕಾರವು ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.</p>.<p>‘ಕೋವಿಡ್–19 ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಎಲ್ಲಾ ಕ್ರಮಗಳು ಮತ್ತು ವ್ಯವಸ್ಥೆಯನ್ನು ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಅವರು ತಿಳಿಸಿದರು.</p>.<p>‘ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸುವುದಿಲ್ಲ. ಬದಲಿಗೆ ಚುನಾವಣಾ ಪ್ರಚಾರದ ಕೊನೆ ದಿನವಾದ ಏಪ್ರಿಲ್ 26ರಂದು ಸಣ್ಣ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೆ ಜಿಲ್ಲೆಗಳಲ್ಲಿ ಮಮತಾ ಬ್ಯಾನರ್ಜಿ ಅವರು ಕೇವಲ 30 ನಿಮಿಷಗಳ ರ್ಯಾಲಿಯನ್ನು ನಡೆಸಲಿದ್ದಾರೆ’ ಎಂದು ಟಿಎಂಸಿ ನಾಯಕ ಡೆರೇಕ್ ಒಬ್ರಿಯನ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಭಾನುವಾರ 8,419 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 28 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.</p>.<p>‘ದೇಶದೆಲ್ಲೆಡೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿವೆ. ಪಶ್ಚಿಮ ಬಂಗಾಳ ಸರ್ಕಾರವು ತಮ್ಮ ರಾಜ್ಯದ ಜನರನ್ನು ರಕ್ಷಿಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ ಪ್ರಧಾನಿ ಮೋದಿ ಅವರಲ್ಲಿ ಹೆಚ್ಚುವರಿ ಲಸಿಕೆ ಮತ್ತು ಔಷಧಿಗಳಿಗಾಗಿ ಮನವಿ ಮಾಡಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.</p>.<p>‘ಕೋವಿಡ್–19 ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಎಲ್ಲಾ ಕ್ರಮಗಳು ಮತ್ತು ವ್ಯವಸ್ಥೆಯನ್ನು ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಅವರು ತಿಳಿಸಿದರು.</p>.<p>‘ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸುವುದಿಲ್ಲ. ಬದಲಿಗೆ ಚುನಾವಣಾ ಪ್ರಚಾರದ ಕೊನೆ ದಿನವಾದ ಏಪ್ರಿಲ್ 26ರಂದು ಸಣ್ಣ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೆ ಜಿಲ್ಲೆಗಳಲ್ಲಿ ಮಮತಾ ಬ್ಯಾನರ್ಜಿ ಅವರು ಕೇವಲ 30 ನಿಮಿಷಗಳ ರ್ಯಾಲಿಯನ್ನು ನಡೆಸಲಿದ್ದಾರೆ’ ಎಂದು ಟಿಎಂಸಿ ನಾಯಕ ಡೆರೇಕ್ ಒಬ್ರಿಯನ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಭಾನುವಾರ 8,419 ಹೊಸ ಪ್ರಕರಣಗಳು ವರದಿಯಾಗಿವೆ. ಹೊಸದಾಗಿ 28 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>