<p>ಶ್ರೀನಗರ: ಮಗನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಉಗ್ರರನ್ನು ಕ್ಷಮಿಸಲು ಸಿದ್ಧ ಎಂದು ಶ್ರೀನಗರದ ಪ್ರಸಿದ್ಧ ಕೃಷ್ಣ ಡಾಬಾ ಸಸ್ಯಾಹಾರಿ ರೆಸ್ಟೋರೆಂಟ್ನ ಮಾಲೀಕ ರಮೇಶ ಕುಮಾರ್ ಹೇಳಿಕೆ ನೀಡಿದ್ದಾರೆ.</p>.<p>ಫೆಬ್ರವರಿ 17ರಂದು ಸಂಜೆ ದುರ್ಗಾನಾಗ್ ಪ್ರದೇಶದಲ್ಲಿರುವ ಸ್ಥಿತಗೊಂಡಿರುವ ಐಷಾರಾಮಿ ಉಪಹಾರ ಗೃಹದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ರಮೇಶ್ ಅವರ ಪುತ್ರ ಆಕಾಶ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಫೆಬ್ರವರಿ 28ರಂದು ಮೃತಪಟ್ಟಿದ್ದರು.</p>.<p>'ಆಕಾಶ್ನ ಹತ್ಯೆಯಲ್ಲಿ ಭಾಗಿಯಾದವರೆಲ್ಲ ಅವರ ಹೆತ್ತವರ ಮಕ್ಕಳಾಗಿದ್ದಾರೆ. ಅವರ ವಿರುದ್ಧ ನನಗೆ ಯಾವುದೇ ದೂರುಗಳಿಲ್ಲ. ಸರ್ಕಾರ ಅವರನ್ನು ಬಿಡುಗಡೆ ಮಾಡಲು ಬಯಸಿದರೂ ನನಗೆ ಯಾವುದೇ ಅಭ್ಯಂತರವಿಲ್ಲ' ಎಂದು ರಮೇಶ್ ಹೇಳಿದ್ದಾರೆ.</p>.<p>ಮಗನ ಹತ್ಯೆಯ ಹೊರತಾಗಿಯೂ ತಾವು ಹುಟ್ಟಿ ಬೆಳೆದ ಕಣಿವೆ ರಾಜ್ಯವು ಹೆಚ್ಚು ಸುರಕ್ಷಿತ ಎಂದು ಅಭಿಪ್ರಾಯಪಟ್ಟಿದ್ದಾರೆ. 'ಈ ಕಣಿವೆ ಸುರಕ್ಷಿತವೆಂದು ಭಾವಿಸುತ್ತೇನೆ. ಇದು ನನ್ನ ಜಾಗ. ಇಲ್ಲೇ ಹುಟ್ಟಿ ಬೆಳೆದಿದ್ದೇನೆ. ನನಗೆ ಯಾವುದೇ ರೀತಿಯ ಬೆದರಿಕೆಯಿಲ್ಲ' ಎಂದು ಹೇಳಿದ್ದಾರೆ.</p>.<p>ಆಕಾಶ್ ಹತ್ಯೆ ಪ್ರಕರಣದ ಎರಡು ದಿನಗಳೊಳಗೆ ಆರೋಪಿಗಳಾದ ಮೂವರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದರು.</p>.<p>ಗರಿಷ್ಠ ಭದ್ರತಾ ವಲಯ ದುರ್ಗಾನಾಗ್ ಪ್ರದೇಶದಲ್ಲಿ ಕೃಷ್ಣ ಡಾಬಾ ಸ್ಥಿತಗೊಂಡಿದೆ. ಸೇನೆಯ 15 ಕಾರ್ಪ್ ಕೇಂದ್ರ ಕಚೇರಿಯು ಕೇವಲ ಒಂದು ಕಿ.ಮೀ. ದೂರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಗರ: ಮಗನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಉಗ್ರರನ್ನು ಕ್ಷಮಿಸಲು ಸಿದ್ಧ ಎಂದು ಶ್ರೀನಗರದ ಪ್ರಸಿದ್ಧ ಕೃಷ್ಣ ಡಾಬಾ ಸಸ್ಯಾಹಾರಿ ರೆಸ್ಟೋರೆಂಟ್ನ ಮಾಲೀಕ ರಮೇಶ ಕುಮಾರ್ ಹೇಳಿಕೆ ನೀಡಿದ್ದಾರೆ.</p>.<p>ಫೆಬ್ರವರಿ 17ರಂದು ಸಂಜೆ ದುರ್ಗಾನಾಗ್ ಪ್ರದೇಶದಲ್ಲಿರುವ ಸ್ಥಿತಗೊಂಡಿರುವ ಐಷಾರಾಮಿ ಉಪಹಾರ ಗೃಹದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ರಮೇಶ್ ಅವರ ಪುತ್ರ ಆಕಾಶ್ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಫೆಬ್ರವರಿ 28ರಂದು ಮೃತಪಟ್ಟಿದ್ದರು.</p>.<p>'ಆಕಾಶ್ನ ಹತ್ಯೆಯಲ್ಲಿ ಭಾಗಿಯಾದವರೆಲ್ಲ ಅವರ ಹೆತ್ತವರ ಮಕ್ಕಳಾಗಿದ್ದಾರೆ. ಅವರ ವಿರುದ್ಧ ನನಗೆ ಯಾವುದೇ ದೂರುಗಳಿಲ್ಲ. ಸರ್ಕಾರ ಅವರನ್ನು ಬಿಡುಗಡೆ ಮಾಡಲು ಬಯಸಿದರೂ ನನಗೆ ಯಾವುದೇ ಅಭ್ಯಂತರವಿಲ್ಲ' ಎಂದು ರಮೇಶ್ ಹೇಳಿದ್ದಾರೆ.</p>.<p>ಮಗನ ಹತ್ಯೆಯ ಹೊರತಾಗಿಯೂ ತಾವು ಹುಟ್ಟಿ ಬೆಳೆದ ಕಣಿವೆ ರಾಜ್ಯವು ಹೆಚ್ಚು ಸುರಕ್ಷಿತ ಎಂದು ಅಭಿಪ್ರಾಯಪಟ್ಟಿದ್ದಾರೆ. 'ಈ ಕಣಿವೆ ಸುರಕ್ಷಿತವೆಂದು ಭಾವಿಸುತ್ತೇನೆ. ಇದು ನನ್ನ ಜಾಗ. ಇಲ್ಲೇ ಹುಟ್ಟಿ ಬೆಳೆದಿದ್ದೇನೆ. ನನಗೆ ಯಾವುದೇ ರೀತಿಯ ಬೆದರಿಕೆಯಿಲ್ಲ' ಎಂದು ಹೇಳಿದ್ದಾರೆ.</p>.<p>ಆಕಾಶ್ ಹತ್ಯೆ ಪ್ರಕರಣದ ಎರಡು ದಿನಗಳೊಳಗೆ ಆರೋಪಿಗಳಾದ ಮೂವರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದರು.</p>.<p>ಗರಿಷ್ಠ ಭದ್ರತಾ ವಲಯ ದುರ್ಗಾನಾಗ್ ಪ್ರದೇಶದಲ್ಲಿ ಕೃಷ್ಣ ಡಾಬಾ ಸ್ಥಿತಗೊಂಡಿದೆ. ಸೇನೆಯ 15 ಕಾರ್ಪ್ ಕೇಂದ್ರ ಕಚೇರಿಯು ಕೇವಲ ಒಂದು ಕಿ.ಮೀ. ದೂರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>