<p><strong>ಬಸೀರ್ಹಾಟ್:</strong> ಪಶ್ಚಿಮ ಬಂಗಾಳದ ಜನ ಹೇಳಿದರೆ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಉತ್ತರ 24 ಪರಗಣ ಜಿಲ್ಲೆಯ ಬಸೀರ್ಹಾಟ್ನಲ್ಲಿ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಸೋಲನುಭವಿಸಲಿದೆ. ಮೇ 2ರಂದು ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.</p>.<p>ಕೂಚ್ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದಲ್ಲಿ ಸಿಐಎಸ್ಎಫ್ ಸಿಬ್ಬಂದಿಯ ಗುಂಡಿನ ದಾಳಿಗೆ ನಾಲ್ವರು ಮೃತಪಟ್ಟ ವಿಚಾರದಲ್ಲಿ ಮಮತಾ ಅವರು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದರು.</p>.<p><strong>ಓದಿ:</strong><a href="https://www.prajavani.net/india-news/mamatas-advice-to-gherao-central-forces-instigated-people-to-attack-cisf-says-amit-shah-821557.html" itemprop="url">ಸಿಐಎಸ್ಎಫ್ ಮೇಲೆ ಜನ ದಾಳಿ ಮಾಡಲು ಮಮತಾ ಹೇಳಿಕೆ ಉತ್ತೇಜನ: ಅಮಿತ್ ಶಾ ಆರೋಪ</a></p>.<p>‘ದೀದಿ (ಮಮತಾ) ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನ ಹೇಳಿದರೆ ನಾನು ರಾಜೀನಾಮೆ ನೀಡುತ್ತೇನೆ. ತಲೆಬಾಗಿಸಿ ಆ ಕೆಲಸ ಮಾಡಬಲ್ಲೆ. ಆದರೆ, ಮಮತಾ ಅವರು ಮೇ 2ರಂದು ಸ್ಥಾನ ತ್ಯಜಿಸಬೇಕಾಗಲಿದೆ’ ಎಂದು ಶಾ ಹೇಳಿದ್ದಾರೆ.</p>.<p>ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಜನರು ಸಿಐಎಸ್ಎಫ್ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿಯ ಬಂದೂಕು ಕಸಿದುಕೊಳ್ಳಲು ಯತ್ನಿಸಿದ್ದರು. ಆ ಸಂದರ್ಭ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು.</p>.<p><strong>ಓದಿ:</strong><a href="https://www.prajavani.net/india-news/pm-modi-mamata-equally-popular-in-bengal-prashant-kishor-in-purported-audio-clip-released-by-bjp-821434.html" itemprop="url" target="_blank">ಬಂಗಾಳದಲ್ಲಿ ದೀದಿಯಷ್ಟೇ ಮೋದಿ ಜನಪ್ರಿಯ: ಪ್ರಶಾಂತ್ ಧ್ವನಿಮುದ್ರಿಕೆ ಬಹಿರಂಗ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸೀರ್ಹಾಟ್:</strong> ಪಶ್ಚಿಮ ಬಂಗಾಳದ ಜನ ಹೇಳಿದರೆ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಉತ್ತರ 24 ಪರಗಣ ಜಿಲ್ಲೆಯ ಬಸೀರ್ಹಾಟ್ನಲ್ಲಿ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಸೋಲನುಭವಿಸಲಿದೆ. ಮೇ 2ರಂದು ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.</p>.<p>ಕೂಚ್ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದಲ್ಲಿ ಸಿಐಎಸ್ಎಫ್ ಸಿಬ್ಬಂದಿಯ ಗುಂಡಿನ ದಾಳಿಗೆ ನಾಲ್ವರು ಮೃತಪಟ್ಟ ವಿಚಾರದಲ್ಲಿ ಮಮತಾ ಅವರು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದರು.</p>.<p><strong>ಓದಿ:</strong><a href="https://www.prajavani.net/india-news/mamatas-advice-to-gherao-central-forces-instigated-people-to-attack-cisf-says-amit-shah-821557.html" itemprop="url">ಸಿಐಎಸ್ಎಫ್ ಮೇಲೆ ಜನ ದಾಳಿ ಮಾಡಲು ಮಮತಾ ಹೇಳಿಕೆ ಉತ್ತೇಜನ: ಅಮಿತ್ ಶಾ ಆರೋಪ</a></p>.<p>‘ದೀದಿ (ಮಮತಾ) ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನ ಹೇಳಿದರೆ ನಾನು ರಾಜೀನಾಮೆ ನೀಡುತ್ತೇನೆ. ತಲೆಬಾಗಿಸಿ ಆ ಕೆಲಸ ಮಾಡಬಲ್ಲೆ. ಆದರೆ, ಮಮತಾ ಅವರು ಮೇ 2ರಂದು ಸ್ಥಾನ ತ್ಯಜಿಸಬೇಕಾಗಲಿದೆ’ ಎಂದು ಶಾ ಹೇಳಿದ್ದಾರೆ.</p>.<p>ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಜನರು ಸಿಐಎಸ್ಎಫ್ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿಯ ಬಂದೂಕು ಕಸಿದುಕೊಳ್ಳಲು ಯತ್ನಿಸಿದ್ದರು. ಆ ಸಂದರ್ಭ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು.</p>.<p><strong>ಓದಿ:</strong><a href="https://www.prajavani.net/india-news/pm-modi-mamata-equally-popular-in-bengal-prashant-kishor-in-purported-audio-clip-released-by-bjp-821434.html" itemprop="url" target="_blank">ಬಂಗಾಳದಲ್ಲಿ ದೀದಿಯಷ್ಟೇ ಮೋದಿ ಜನಪ್ರಿಯ: ಪ್ರಶಾಂತ್ ಧ್ವನಿಮುದ್ರಿಕೆ ಬಹಿರಂಗ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>