<p><strong>ನವದೆಹಲಿ: </strong>ಭಾರತ–ಪಾಕಿಸ್ತಾನ ಗಡಿಭಾಗದಲ್ಲಿ ಸುರಂಗಗಳು ಮತ್ತು ಡ್ರೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ನೆರೆಯ ರಾಷ್ಟ್ರದವರು ಭಾರತದ ವಿರುದ್ಧ ಹಗೆತನ ಸಾಧಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಗಡಿ ಭದ್ರತಾ ಪಡೆಯ (ಬಿಎಸ್ಎಫ್) 56ನೇ ದಿನಾಚರಣೆಯಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದ ಗಡಿಯ ಉದ್ದಕ್ಕೂ ನೆರೆಯ ರಾಷ್ಟ್ರದಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದು, ಇದರಿಂದ ಅನಿಶ್ಚಿತ ವಾತಾವರಣ ನಿರ್ಮಾಣವಾಗಿದೆ' ಎಂದು ಪ್ರತಿಪಾದಿಸಿದರು.</p>.<p>‘ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ಒಳನುಸುಳುವಿಕೆಗಾಗಿ ನಮ್ಮ ನೆರೆಹೊರೆಯವರು ಭಾರತ-ಪಾಕಿಸ್ತಾನ ಗಡಿಯಲ್ಲಿ ಇಂಥ ಚಟುವಟಿಕೆಗಳನ್ನು ಮಾಡುತ್ತಾರೆ. ಇದಕ್ಕೆ ಗಡಿ ಭಾಗದಲ್ಲಿ ವಶಪಡಿಸಿಕಕೊಂಡಿರುವ ಡ್ರೋನ್ ಮತ್ತು ಸುರಂಗಗಳು ಸಾಕ್ಷಿಯಾಗಿವೆ' ಎಂದು ನಿತ್ಯಾನಂದ ರೈ ಆರೋಪಿಸಿದರು.</p>.<p>ಇದೇ ಸಂದರ್ಭದಲ್ಲಿ ಪ್ರತಿಕೂಲ ಹವಾಮಾನದಲ್ಲಿ ಗಡಿಭಾಗದಲ್ಲಿ ನಿಂತು ದೇಶವನ್ನು ರಕ್ಷಿಸುತ್ತಿರುವ ಯೋಧರ ಕಾರ್ಯವನ್ನು ಸಚಿವರು ಶ್ಲಾಘಿಸಿದರು. ‘ಮಹತ್ವದ ಕಾರ್ಯಕ್ರಮವೊಂದರ ಕಾರಣದಿಂದಾಗಿ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತ–ಪಾಕಿಸ್ತಾನ ಗಡಿಭಾಗದಲ್ಲಿ ಸುರಂಗಗಳು ಮತ್ತು ಡ್ರೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ನೆರೆಯ ರಾಷ್ಟ್ರದವರು ಭಾರತದ ವಿರುದ್ಧ ಹಗೆತನ ಸಾಧಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ಗಡಿ ಭದ್ರತಾ ಪಡೆಯ (ಬಿಎಸ್ಎಫ್) 56ನೇ ದಿನಾಚರಣೆಯಲ್ಲಿ ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭಾರತದ ಗಡಿಯ ಉದ್ದಕ್ಕೂ ನೆರೆಯ ರಾಷ್ಟ್ರದಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದು, ಇದರಿಂದ ಅನಿಶ್ಚಿತ ವಾತಾವರಣ ನಿರ್ಮಾಣವಾಗಿದೆ' ಎಂದು ಪ್ರತಿಪಾದಿಸಿದರು.</p>.<p>‘ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ಒಳನುಸುಳುವಿಕೆಗಾಗಿ ನಮ್ಮ ನೆರೆಹೊರೆಯವರು ಭಾರತ-ಪಾಕಿಸ್ತಾನ ಗಡಿಯಲ್ಲಿ ಇಂಥ ಚಟುವಟಿಕೆಗಳನ್ನು ಮಾಡುತ್ತಾರೆ. ಇದಕ್ಕೆ ಗಡಿ ಭಾಗದಲ್ಲಿ ವಶಪಡಿಸಿಕಕೊಂಡಿರುವ ಡ್ರೋನ್ ಮತ್ತು ಸುರಂಗಗಳು ಸಾಕ್ಷಿಯಾಗಿವೆ' ಎಂದು ನಿತ್ಯಾನಂದ ರೈ ಆರೋಪಿಸಿದರು.</p>.<p>ಇದೇ ಸಂದರ್ಭದಲ್ಲಿ ಪ್ರತಿಕೂಲ ಹವಾಮಾನದಲ್ಲಿ ಗಡಿಭಾಗದಲ್ಲಿ ನಿಂತು ದೇಶವನ್ನು ರಕ್ಷಿಸುತ್ತಿರುವ ಯೋಧರ ಕಾರ್ಯವನ್ನು ಸಚಿವರು ಶ್ಲಾಘಿಸಿದರು. ‘ಮಹತ್ವದ ಕಾರ್ಯಕ್ರಮವೊಂದರ ಕಾರಣದಿಂದಾಗಿ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>