ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಆದರೆ ಅದು ಇನ್ನೂ ಕೊನೆಗೊಂಡಿಲ್ಲ. ಭಾರತೀಯ ಸೇನೆಯ ನೇಮಕಾತಿಗಾಗಿ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಇದಕ್ಕಾಗಿ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.ಇಂತಹ ಕಾರ್ಯಕ್ರಮಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಅದರ ತಡೆಗೆ ನಾವು ಸೇನಾ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕಾಯಿತು. ಆದರೆ, ಅದನ್ನು ರದ್ದು ಮಾಡಿಲ್ಲ’ ಎಂದು ತಿಳಿಸಿದರು.