<p><strong>ನವದೆಹಲಿ: </strong>ಇಲ್ಲಿನ ಐತಿಹಾಸಿಕ ಕೆಂಪುಕೋಟೆ ಸಮೀಪದಲ್ಲಿ ಸತ್ತು ಬಿದ್ದಿದ್ದ ಕಾಗೆ ಮಾದರಿಯಲ್ಲಿ ‘ಹಕ್ಕಿ ಜ್ವರ‘ ಸೋಂಕು ದೃಢಪಟ್ಟ ಕಾರಣ, ಜನವರಿ 26ರವರಗೆ ಈ ಸ್ಮಾರಕಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.</p>.<p>ಕೆಲವು ದಿನಗಳ ಹಿಂದೆ ಕೆಂಪು ಕೋಟೆಯ ಸಮೀಪದಲ್ಲಿ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಮಾದರಿಯನ್ನು ಜಲಂಧರ್ ಮೂಲದ ಪ್ರಯೋಗಾಲಯಕ್ಕೆ ಕಳಹಿಸಲಾಗಿತ್ತು ಎಂದು ದೆಹಲಿಯ ಪಶುವೈದ್ಯಕೀಯ ವಿಭಾಗದ ನಿರ್ದೇಶಕ ರಾಕೇಶ್ ಸಿಂಗ್ ತಿಳಿಸಿದ್ದಾರೆ.</p>.<p>ಸತ್ತೆ ಕಾಗೆ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ದೃಢಪಟ್ಟ ಕಾರಣ, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.</p>.<p>ಶನಿವಾರದಂದು ದೆಹಲಿಯ ಮೃಗಾಲಯದಲ್ಲಿ ಸತ್ತ ಗೂಬೆಯ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ತಗಲಿರುವುದು ದೃಢಪಟ್ಟಿತ್ತು. ಕಳೆದ ವಾರ ದೆಹಲಿಯ ಉದ್ಯಾನಗಳಲ್ಲಿನ ಬಾತುಕೋಳಿ, ಕಾಗೆಗಳ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ಪತ್ತೆಯಾದ ಕಾರಣ, ಪಶ್ಚಿಮ ದೆಹಲಿಯಲ್ಲಿರುವ ಗಾಜಿಪುರದ ಕೋಳಿ ಮಾರುಕಟ್ಟೆಯಿಂದ ಹತ್ತು ದಿನಗಳ ಕಾಲ ಸಂಸ್ಕರಿಸಿದ ಚಿಕನ್ ಖರೀದಿಸಿ ತರುವುದನ್ನು ನಿಷೇಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಇಲ್ಲಿನ ಐತಿಹಾಸಿಕ ಕೆಂಪುಕೋಟೆ ಸಮೀಪದಲ್ಲಿ ಸತ್ತು ಬಿದ್ದಿದ್ದ ಕಾಗೆ ಮಾದರಿಯಲ್ಲಿ ‘ಹಕ್ಕಿ ಜ್ವರ‘ ಸೋಂಕು ದೃಢಪಟ್ಟ ಕಾರಣ, ಜನವರಿ 26ರವರಗೆ ಈ ಸ್ಮಾರಕಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.</p>.<p>ಕೆಲವು ದಿನಗಳ ಹಿಂದೆ ಕೆಂಪು ಕೋಟೆಯ ಸಮೀಪದಲ್ಲಿ 15 ಕಾಗೆಗಳು ಸತ್ತುಬಿದ್ದಿದ್ದವು. ಅವುಗಳ ಮಾದರಿಯನ್ನು ಜಲಂಧರ್ ಮೂಲದ ಪ್ರಯೋಗಾಲಯಕ್ಕೆ ಕಳಹಿಸಲಾಗಿತ್ತು ಎಂದು ದೆಹಲಿಯ ಪಶುವೈದ್ಯಕೀಯ ವಿಭಾಗದ ನಿರ್ದೇಶಕ ರಾಕೇಶ್ ಸಿಂಗ್ ತಿಳಿಸಿದ್ದಾರೆ.</p>.<p>ಸತ್ತೆ ಕಾಗೆ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ದೃಢಪಟ್ಟ ಕಾರಣ, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.</p>.<p>ಶನಿವಾರದಂದು ದೆಹಲಿಯ ಮೃಗಾಲಯದಲ್ಲಿ ಸತ್ತ ಗೂಬೆಯ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ತಗಲಿರುವುದು ದೃಢಪಟ್ಟಿತ್ತು. ಕಳೆದ ವಾರ ದೆಹಲಿಯ ಉದ್ಯಾನಗಳಲ್ಲಿನ ಬಾತುಕೋಳಿ, ಕಾಗೆಗಳ ಮಾದರಿಯಲ್ಲಿ ಹಕ್ಕಿ ಜ್ವರದ ಸೋಂಕು ಪತ್ತೆಯಾದ ಕಾರಣ, ಪಶ್ಚಿಮ ದೆಹಲಿಯಲ್ಲಿರುವ ಗಾಜಿಪುರದ ಕೋಳಿ ಮಾರುಕಟ್ಟೆಯಿಂದ ಹತ್ತು ದಿನಗಳ ಕಾಲ ಸಂಸ್ಕರಿಸಿದ ಚಿಕನ್ ಖರೀದಿಸಿ ತರುವುದನ್ನು ನಿಷೇಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>