ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ನ್ಯಾಯಪೀಠವು, ‘ಮದ್ರಾಸ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಂತ್ರಸ್ತೆಯ ಹೆಸರನ್ನು ಒಂದಲ್ಲ ಹಲವು ಬಾರಿ ಸೇರಿಸಿದೆ ಎಂಬುದನ್ನು ನಾವು ಗಮನಿಸಿದ್ದೇವೆ. ಇದನ್ನು ಸರಿಪಡಿಸಿ, ಬಳಿಕ ಆದೇಶವನ್ನು ಅಪ್ಲೋಡ್ ಮಾಡಬೇಕು ಎಂದು ನಾವು ಹೈಕೋರ್ಟ್ಗೆ ನಿರ್ದೇಶನ ನೀಡುತ್ತಿದ್ದೇವೆ’ ಎಂದು ಹೇಳಿದೆ.