ಸಚಿವಾಲಯಗಳು, ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕೆಳಹಂತದ ಎಲ್ಲ ಸಿಬ್ಬಂದಿ ಹಾಜರಾತಿಯನ್ನು ನಿರ್ವಹಣೆ ಮಾಡಬೇಕು. ಕಚೇರಿಗಳಲ್ಲಿ ದಟ್ಟಣೆ ಆಗದಂತೆ ವಿಭಾಗದ ಮುಖ್ಯಸ್ಥರು ಸೂಚಿಸಿದ ಸಮಯದಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿ ಬದ್ದರಾಗಬೇಕು. ಕಂಟೇನ್ಮೆಂಟ್ ವಲಯದಲ್ಲಿ ಇರುವ ಕಚೇರಿಗಳ ಸಿಬ್ಬಂದಿ ಪರಿಸ್ಥಿತಿ ತಹಬದಿಗೆ ಬರುವವರೆಗೂ ಕಚೇರಿಗೂ ಬರುವುದಕ್ಕೆ ವಿನಾಯಿತಿ ಇದೆ ಎಂದು ತಿಳಿಸಲಾಗಿದೆ.