<p><strong>ನವದೆಹಲಿ: </strong>ದೆಹಲಿಯಲ್ಲಿ ನಡೆದ 17 ವರ್ಷದ ಬಾಲಕಿಯ ಮೇಲಿನ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅವರು ದೆಹಲಿ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ದೆಹಲಿಯಲ್ಲಿ ನಡೆದಿರುವ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ತಾವೇ ಖುದ್ದಾಗಿ ಮಧ್ಯೆಪ್ರವೇಶಿಸಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು. ಜತೆಗೆ ತಪ್ಪಿಸ್ಥರನ್ನು ಅದಷ್ಟು ಬೇಗ ಬಂಧಿಸಬೇಕು ಎಂದು ರೇಖಾ ಶರ್ಮಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಶ್ಚಿಮ ದೆಹಲಿಯ ಉತ್ತಮ್ ನಗರದ ಮೋಹನ್ ಗಾರ್ಡನ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಕಿ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿ ಪರಾರಿಯಾಗಿದ್ದಾರೆ.</p>.<p>‘ಸಂತ್ರಸ್ತ ಬಾಲಕಿಗೆ 17 ವರ್ಷ ವಯಸ್ಸು. ಆಕೆ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ತನ್ನ ತಂಗಿಯ ಜೊತೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿದ್ದಾಗಿ ಗೊತ್ತಾಗಿದೆ. ಮೋಹನ್ ಗಾರ್ಡನ್ ಠಾಣೆಯ ಅಧಿಕಾರಿಗಳಿಗೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಕುರಿತ ಮಾಹಿತಿ ಲಭಿಸಿತ್ತು’ ಎಂದು ದ್ವಾರಕಾ ವಿಭಾಗದ ಡಿಸಿಪಿ ಎಂ.ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/girl-17-attacked-with-acid-near-west-delhis-uttam-nagar-997231.html" target="_blank">ದೆಹಲಿ: ಬೈಕ್ನಲ್ಲಿ ಬಂದು ಬಾಲಕಿ ಮೇಲೆ ಆಸಿಡ್ ದಾಳಿ</a></strong></p>.<p><strong>‘ಆಸಿಡ್ ಮಾರಾಟ ಅವ್ಯಾಹತವಾಗಿದೆ: ನೀವೇನು ಮಾಡುತ್ತಿದ್ದೀರಿ?’</strong><br />‘ಆಯೋಗವು ಸಾಕಷ್ಟು ನೋಟಿಸ್ಗಳನ್ನು ಜಾರಿಗೊಳಿಸಿದೆ. ಹಲವು ಶಿಫಾರಸುಗಳನ್ನು ಮಾಡಿದೆ. ಹೀಗಿದ್ದರೂ ಆಸಿಡ್ ಮಾರಾಟ ಅವ್ಯಾಹತವಾಗಿದೆ. ಯಾರು ಬೇಕಾದರೂ ಆಸಿಡ್ ಖರೀದಿಸಿ ಬಾಲಕಿಯರ ಮೇಲೆ ಎರಚಬಹುದಾಗಿದೆ. ಈ ವಿಚಾರದಲ್ಲಿ ಕ್ರಮ ಕೈಗೊಳ್ಳದೆ ಸರ್ಕಾರಗಳು ನಿದ್ರೆಗೆ ಜಾರಿರುವುದಾದರೂ ಏಕೆ’ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಳಿವಾಲ್ ಪ್ರಶ್ನಿಸಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊವೊಂದನ್ನು ಹಾಕಿರುವ ಅವರು,‘ಆಸಿಡ್ ಮಾರಾಟ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಅಗತ್ಯಬಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ’ ಎಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿಯಲ್ಲಿ ನಡೆದ 17 ವರ್ಷದ ಬಾಲಕಿಯ ಮೇಲಿನ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅವರು ದೆಹಲಿ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ದೆಹಲಿಯಲ್ಲಿ ನಡೆದಿರುವ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ತಾವೇ ಖುದ್ದಾಗಿ ಮಧ್ಯೆಪ್ರವೇಶಿಸಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕು. ಜತೆಗೆ ತಪ್ಪಿಸ್ಥರನ್ನು ಅದಷ್ಟು ಬೇಗ ಬಂಧಿಸಬೇಕು ಎಂದು ರೇಖಾ ಶರ್ಮಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಪಶ್ಚಿಮ ದೆಹಲಿಯ ಉತ್ತಮ್ ನಗರದ ಮೋಹನ್ ಗಾರ್ಡನ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಕಿ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿ ಪರಾರಿಯಾಗಿದ್ದಾರೆ.</p>.<p>‘ಸಂತ್ರಸ್ತ ಬಾಲಕಿಗೆ 17 ವರ್ಷ ವಯಸ್ಸು. ಆಕೆ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ತನ್ನ ತಂಗಿಯ ಜೊತೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿದ್ದಾಗಿ ಗೊತ್ತಾಗಿದೆ. ಮೋಹನ್ ಗಾರ್ಡನ್ ಠಾಣೆಯ ಅಧಿಕಾರಿಗಳಿಗೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಕುರಿತ ಮಾಹಿತಿ ಲಭಿಸಿತ್ತು’ ಎಂದು ದ್ವಾರಕಾ ವಿಭಾಗದ ಡಿಸಿಪಿ ಎಂ.ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/india-news/girl-17-attacked-with-acid-near-west-delhis-uttam-nagar-997231.html" target="_blank">ದೆಹಲಿ: ಬೈಕ್ನಲ್ಲಿ ಬಂದು ಬಾಲಕಿ ಮೇಲೆ ಆಸಿಡ್ ದಾಳಿ</a></strong></p>.<p><strong>‘ಆಸಿಡ್ ಮಾರಾಟ ಅವ್ಯಾಹತವಾಗಿದೆ: ನೀವೇನು ಮಾಡುತ್ತಿದ್ದೀರಿ?’</strong><br />‘ಆಯೋಗವು ಸಾಕಷ್ಟು ನೋಟಿಸ್ಗಳನ್ನು ಜಾರಿಗೊಳಿಸಿದೆ. ಹಲವು ಶಿಫಾರಸುಗಳನ್ನು ಮಾಡಿದೆ. ಹೀಗಿದ್ದರೂ ಆಸಿಡ್ ಮಾರಾಟ ಅವ್ಯಾಹತವಾಗಿದೆ. ಯಾರು ಬೇಕಾದರೂ ಆಸಿಡ್ ಖರೀದಿಸಿ ಬಾಲಕಿಯರ ಮೇಲೆ ಎರಚಬಹುದಾಗಿದೆ. ಈ ವಿಚಾರದಲ್ಲಿ ಕ್ರಮ ಕೈಗೊಳ್ಳದೆ ಸರ್ಕಾರಗಳು ನಿದ್ರೆಗೆ ಜಾರಿರುವುದಾದರೂ ಏಕೆ’ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಳಿವಾಲ್ ಪ್ರಶ್ನಿಸಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊವೊಂದನ್ನು ಹಾಕಿರುವ ಅವರು,‘ಆಸಿಡ್ ಮಾರಾಟ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ. ಅಗತ್ಯಬಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ’ ಎಂದಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>