ನವರಾತ್ರಿ ಹಬ್ಬದ ಅಂಗವಾಗಿ ದೇವಾಲಯಗಳನ್ನು ಮತ್ತೆ ತೆರೆಯಲಾಗಿದೆ. ಒಂಬತ್ತು ದಿನಗಳ ಹಬ್ಬದ ಮೊದಲನೇ ದಿನವಾದ ಗುರುವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಪತ್ನಿ ರಶ್ಮಿ ಠಾಕ್ರೆ ಮತ್ತು ಇಬ್ಬರು ಪುತ್ರರಾದ ಆದಿತ್ಯ ಮತ್ತು ತೇಜಸ್ ಅವರೊಂದಿಗೆ ಮುಂಬಾ ದೇವಿಯ ಆಲಯಕ್ಕೆ ಬೆಳಿಗ್ಗೆ 8.45ರ ಸುಮಾರಿಗೆ ಭೇಟಿ ನೀಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.