ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲೋಪಥಿ ವಿರುದ್ಧದ ಬಾಬಾ ರಾಮದೇವ್‌ ಹೇಳಿಕೆ: ಅರ್ಜಿ ವಿಚಾರಣೆ 12ಕ್ಕೆ ಮುಂದೂಡಿಕೆ

Last Updated 5 ಜುಲೈ 2021, 10:27 IST
ಅಕ್ಷರ ಗಾತ್ರ

ನವದೆಹಲಿ: ಅಲೋಪಥಿ ಚಿಕಿತ್ಸೆ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ವಿಚಾರಣೆಯನ್ನು ತಡೆಹಿಡಿಯುವಂತೆ ಕೋರಿ ಬಾಬಾ ರಾಮದೇವ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜು.12ರಂದು ನಡೆಸುವುದಾಗಿ ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ.

‘ಕೋವಿಡ್‌ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ಬಾಬಾ ರಾಮದೇವ್‌ ನೀಡಿರುವ ಹೇಳಿಕೆಯ ಮೂಲ ದಾಖಲೆಗಳು ಭಾನುವಾರ ರಾತ್ರಿ 11 ಗಂಟೆಗೆ ಸಿಕ್ಕಿವೆ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌ ಬೊಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠವು ಹೇಳಿದೆ.

ಕೋವಿಡ್‌ ಸಂದರ್ಭದಲ್ಲಿ ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ರಾಮದೇವ್‌ ಅವರು ನೀಡಿರುವ ಹೇಳಿಕೆಯ ಮೂಲ ದಾಖಲೆಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ಭಾರತೀಯ ವೈದ್ಯಕೀಯ ಸಂಘವು(ಐಎಂಎ) ರಾಮದೇವ್‌ ಅವರ ಹೇಳಿಕೆಯನ್ನು ಖಂಡಿಸಿ ಬಿಹಾರ ಮತ್ತು ಛತ್ತೀಸಗಡದ ವಿವಿಧ ಠಾಣೆಗಳಿಗೆ ದೂರು ನೀಡಿತ್ತು. ಈ ಕುರಿತ ತನಿಖೆಗೆ ತಡೆ ನೀಡಬೇಕೆಂದು ಕೋರಿ ರಾಮ್‌ದೇವ್‌ ಅವರು ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT