ಮುಂಬೈ: ರೆಮ್ಡಿಸಿವಿರ್ ಇಂಜೆಕ್ಷನ್ಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಆರೋಪದ ಮೇಲೆ ಔಷಧ ಕಂಪನಿಯ ಉನ್ನತಮಟ್ಟದ ಅಧಿಕಾರಿಯನ್ನು ವಿಚಾರಣೆಗೊಳಪಡಿಸಿಸುವುದಕ್ಕೆ ಆಕ್ಷೇಪಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಶಿವಸೇನಾ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಕಾನೂನು ಮತ್ತು ಆರೋಗ್ಯ ಸ್ಥಿತಿಗತಿಯನ್ನು ಹಾಳುಗೆಡಹುವ ಪಿತೂರಿಯನ್ನು ಇವರು ನಡೆಸಿದ್ದಾರೆಯೇ ಎಂಬ ಅಚ್ಚರಿ ವ್ಯಕ್ತಪಡಿಸಿದೆ.