<p><strong>ನಾಗಪುರ:</strong> ಕೋವಿಡ್–19ಗೆ ಚಿಕಿತ್ಸೆ ನೀಡಲು 10 ಸಾವಿರ ರೆಮ್ಡಿಸಿವಿರ್ ಇಂಜೆಕ್ಷನ್ಗಳನ್ನು ನಾಗಪುರಕ್ಕೆ ಪೂರೈಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸನ್ ಫಾರ್ಮಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.</p>.<p>ಸನ್ ಫಾರ್ಮಾ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಸಾಂಘ್ವಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಗಡ್ಕರಿ ಅವರು, ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ರೆಮ್ಡಿಸಿವಿರ್ ಲಭ್ಯವಾಗುವಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು ಎಂದು ಪ್ರಕಟಣೆ ತಿಳಿಸಿದೆ.</p>.<p>ತಕ್ಷಣವೇ 5 ಸಾವಿರ ಇಂಜೆಕ್ಷನ್ಗಳನ್ನು ಪೂರೈಸಲಾಗುವುದು. ಉಳಿದ 5 ಸಾವಿರ ಇಂಜೆಕ್ಷನ್ಗಳನ್ನು ಎರಡು–ಮೂರು ದಿನಗಳಲ್ಲಿ ಪೂರೈಸಲಾಗುವುದು ಎಂದು ಸಾಂಘ್ವಿ ಭರವಸೆ ನೀಡಿದ್ದಾರೆ</p>.<p>ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ರೆಮ್ಡಿಸಿವಿರ್ ಔಷಧಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>‘ರಾಜ್ಯದಲ್ಲಿ ರೆಮ್ಡಿಸಿವರ್ ಇಂಜೆಕ್ಷನ್ ಕೊರತೆಯಾಗಿದೆ. ಜತೆಗೆ ಲಸಿಕೆ ಪೂರೈಕೆಯೂ ಕಡಿಮೆಯಾಗಿದೆ’ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಬಾಳಾಸಾಹೇಬ್ ತೋರಾಟ್ ಶನಿವಾರ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ:</strong> ಕೋವಿಡ್–19ಗೆ ಚಿಕಿತ್ಸೆ ನೀಡಲು 10 ಸಾವಿರ ರೆಮ್ಡಿಸಿವಿರ್ ಇಂಜೆಕ್ಷನ್ಗಳನ್ನು ನಾಗಪುರಕ್ಕೆ ಪೂರೈಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸನ್ ಫಾರ್ಮಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.</p>.<p>ಸನ್ ಫಾರ್ಮಾ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ ಸಾಂಘ್ವಿ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಗಡ್ಕರಿ ಅವರು, ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ರೆಮ್ಡಿಸಿವಿರ್ ಲಭ್ಯವಾಗುವಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು ಎಂದು ಪ್ರಕಟಣೆ ತಿಳಿಸಿದೆ.</p>.<p>ತಕ್ಷಣವೇ 5 ಸಾವಿರ ಇಂಜೆಕ್ಷನ್ಗಳನ್ನು ಪೂರೈಸಲಾಗುವುದು. ಉಳಿದ 5 ಸಾವಿರ ಇಂಜೆಕ್ಷನ್ಗಳನ್ನು ಎರಡು–ಮೂರು ದಿನಗಳಲ್ಲಿ ಪೂರೈಸಲಾಗುವುದು ಎಂದು ಸಾಂಘ್ವಿ ಭರವಸೆ ನೀಡಿದ್ದಾರೆ</p>.<p>ಮಹಾರಾಷ್ಟ್ರದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ರೆಮ್ಡಿಸಿವಿರ್ ಔಷಧಕ್ಕೆ ಬೇಡಿಕೆ ಹೆಚ್ಚಾಗಿದೆ.</p>.<p>‘ರಾಜ್ಯದಲ್ಲಿ ರೆಮ್ಡಿಸಿವರ್ ಇಂಜೆಕ್ಷನ್ ಕೊರತೆಯಾಗಿದೆ. ಜತೆಗೆ ಲಸಿಕೆ ಪೂರೈಕೆಯೂ ಕಡಿಮೆಯಾಗಿದೆ’ ಎಂದು ಮಹಾರಾಷ್ಟ್ರದ ಕಂದಾಯ ಸಚಿವ ಬಾಳಾಸಾಹೇಬ್ ತೋರಾಟ್ ಶನಿವಾರ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>