<p><strong>ನವದೆಹಲಿ</strong>: ದೆಹಲಿಯ ವಿದ್ಯುತ್ ಸರಬರಾಜು ಮಂಡಳಿಗಳಿಗೆ(ಡಿಸ್ಕಾಂ) ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಾಮ ನಿರ್ದೇಶನ ಮಾಡಿದ್ದ ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ವಜಾ ಮಾಡಿದ್ದಾರೆ. ಸಕ್ಸೇನಾ ಅವರ ಈ ಕ್ರಮ ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.</p>.<p>ದೆಹಲಿಯ ಚುನಾಯಿತ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ಹಿಂಪಡೆಯುವ ಹೊಸ ಸಂಪ್ರದಾಯವನ್ನು ಲೆಫ್ಟಿನೆಂಟ್ ಗವರ್ನರ್ ಆರಂಭಿಸಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>ಈ ನೇಮಕದ ಹಿಂದೆ ₹8,000 ಕೋಟಿ ಅಕ್ರಮದ ಆರೋಪ ಮಾಡಿರುವ ಲೆಫ್ಟಿನೆಂಟ್ ಗವರ್ನರ್, ಕೇಂದ್ರದ ತನಿಖಾ ಸಂಸ್ಥೆಗಳಿಂದ ತನಿಖೆ ನಡೆಸಲಿ ಎಂದು ಸಿಸೋಡಿಯಾ ಸವಾಲು ಹಾಕಿದ್ದಾರೆ.</p>.<p>ದೆಹಲಿಯ ಇಂಧನ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ವಿ.ಕೆ. ಸಕ್ಸೇನಾ ನಿರ್ಧಾರವು ಅಸಂವಿಧಾನಿಕ, ಕಾನೂನುಬಾಹಿರ ಮತ್ತು ಸ್ಥಾಪಿತ ಕಾರ್ಯವಿಧಾನಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.</p>.<p>ನಮ್ಮ ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಡಿಸ್ಕಾಂ ಸದಸ್ಯರನ್ನು ವಜಾ ಮಾಡಿದಂತೆ ಕಾಣುತ್ತಿದೆ. ಭಿನ್ನಾಭಿಪ್ರಾಯದ ವಿಷಯವನ್ನು ಹೀಗೆ ಬಳಸಬಾರದು. ಅದಕ್ಕೆಂದು ನಿಯಮಾವಳಿ ಇವೆ ಎಂದು ಅವರು ಹೇಳಿದರು.</p>.<p>ಲೆಫ್ಟಿನೆಂಟ್ ಗವರ್ನರ್ ತಮ್ಮ ಅಧಿಕಾರದ ಮಿತಿ ಕುರಿತಂತೆ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನೂ ಪಾಲಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸ್, ಭೂಮಿ ಮತ್ತು ಸೇವೆಗಳ ಕುರಿತಂತೆ ಮಾತ್ರ ಅವರು ಸ್ವಂತ ನಿರ್ಧಾರ ಕೈಗೊಳ್ಳಬಹುದು ಎಂದು ಸಿಸೋಡಿಯಾ ಹೇಳಿದ್ದಾರೆ.</p>.<p>ಎಎಪಿ ಮುಖಂಡ ಜಾಸ್ಮಿನ್ ಶಾ ಸೇರಿದಂತೆ ಇಂಧನ ಇಲಾಖೆಯ ಡಿಸ್ಕಾಂಗಳಿಗೆ ಸರ್ಕಾರ ನಾಮ ನಿರ್ದೇಶನ ಮಾಡಿದ್ದ ಸದಸ್ಯರನ್ನು ವಜಾ ಮಾಡಿ, ಹಿರಿಯ ಅಧಿಕಾರಿಗಳನ್ನು ಆ ಜಾಗಕ್ಕೆ ನೇಮಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಮೂಲಗಳು ತಿಳಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ವಿದ್ಯುತ್ ಸರಬರಾಜು ಮಂಡಳಿಗಳಿಗೆ(ಡಿಸ್ಕಾಂ) ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ನಾಮ ನಿರ್ದೇಶನ ಮಾಡಿದ್ದ ಸದಸ್ಯರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ವಜಾ ಮಾಡಿದ್ದಾರೆ. ಸಕ್ಸೇನಾ ಅವರ ಈ ಕ್ರಮ ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.</p>.<p>ದೆಹಲಿಯ ಚುನಾಯಿತ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ಹಿಂಪಡೆಯುವ ಹೊಸ ಸಂಪ್ರದಾಯವನ್ನು ಲೆಫ್ಟಿನೆಂಟ್ ಗವರ್ನರ್ ಆರಂಭಿಸಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.</p>.<p>ಈ ನೇಮಕದ ಹಿಂದೆ ₹8,000 ಕೋಟಿ ಅಕ್ರಮದ ಆರೋಪ ಮಾಡಿರುವ ಲೆಫ್ಟಿನೆಂಟ್ ಗವರ್ನರ್, ಕೇಂದ್ರದ ತನಿಖಾ ಸಂಸ್ಥೆಗಳಿಂದ ತನಿಖೆ ನಡೆಸಲಿ ಎಂದು ಸಿಸೋಡಿಯಾ ಸವಾಲು ಹಾಕಿದ್ದಾರೆ.</p>.<p>ದೆಹಲಿಯ ಇಂಧನ ಇಲಾಖೆಯ ಜವಾಬ್ದಾರಿಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ವಿ.ಕೆ. ಸಕ್ಸೇನಾ ನಿರ್ಧಾರವು ಅಸಂವಿಧಾನಿಕ, ಕಾನೂನುಬಾಹಿರ ಮತ್ತು ಸ್ಥಾಪಿತ ಕಾರ್ಯವಿಧಾನಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.</p>.<p>ನಮ್ಮ ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಡಿಸ್ಕಾಂ ಸದಸ್ಯರನ್ನು ವಜಾ ಮಾಡಿದಂತೆ ಕಾಣುತ್ತಿದೆ. ಭಿನ್ನಾಭಿಪ್ರಾಯದ ವಿಷಯವನ್ನು ಹೀಗೆ ಬಳಸಬಾರದು. ಅದಕ್ಕೆಂದು ನಿಯಮಾವಳಿ ಇವೆ ಎಂದು ಅವರು ಹೇಳಿದರು.</p>.<p>ಲೆಫ್ಟಿನೆಂಟ್ ಗವರ್ನರ್ ತಮ್ಮ ಅಧಿಕಾರದ ಮಿತಿ ಕುರಿತಂತೆ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನೂ ಪಾಲಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಪೊಲೀಸ್, ಭೂಮಿ ಮತ್ತು ಸೇವೆಗಳ ಕುರಿತಂತೆ ಮಾತ್ರ ಅವರು ಸ್ವಂತ ನಿರ್ಧಾರ ಕೈಗೊಳ್ಳಬಹುದು ಎಂದು ಸಿಸೋಡಿಯಾ ಹೇಳಿದ್ದಾರೆ.</p>.<p>ಎಎಪಿ ಮುಖಂಡ ಜಾಸ್ಮಿನ್ ಶಾ ಸೇರಿದಂತೆ ಇಂಧನ ಇಲಾಖೆಯ ಡಿಸ್ಕಾಂಗಳಿಗೆ ಸರ್ಕಾರ ನಾಮ ನಿರ್ದೇಶನ ಮಾಡಿದ್ದ ಸದಸ್ಯರನ್ನು ವಜಾ ಮಾಡಿ, ಹಿರಿಯ ಅಧಿಕಾರಿಗಳನ್ನು ಆ ಜಾಗಕ್ಕೆ ನೇಮಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಕಚೇರಿ ಮೂಲಗಳು ತಿಳಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>