ಘಜಿಯಾಬಾದ್ದಲ್ಲಿ ಭಾನುವಾರ ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ‘ಹಿಂದೂಸ್ತಾನ ಫಸ್ಟ್, ಹಿಂದೂಸ್ತಾನಿ ಬೆಸ್ಟ್’ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ‘ಎಲ್ಲ ಭಾರತೀಯರ ಡಿಎನ್ಎ ಒಂದೇ’ ಎಂದು ಹೇಳಿಕೆ ನೀಡಿದ್ದರು. ಜತೆಗೆ, ‘ಗೋವು ಪವಿತ್ರ ಪ್ರಾಣಿ. ಆದರೆ, ಗುಂಪು ಹತ್ಯೆ ಮಾಡುವುದು ಹಿಂದುತ್ವಕ್ಕೆ ವಿರುದ್ಧವಾಗಿದೆ. ಕೆಲವು ಸಂದರ್ಭಗಳಲ್ಲಿ ಗುಂಪು ಹತ್ಯೆಯ ಸುಳ್ಳು ಪ್ರಕರಣಗಳನ್ನು ಕೆಲವರ ವಿರುದ್ಧ ದಾಖಲಿಸಲಾಗಿದೆ’ ಎಂದು ಹೇಳಿದ್ದರು.