<p><strong>ಪುದುಚೇರಿ:</strong> ‘ತಮಿಳಿನ ಖ್ಯಾತ ಬರಹಗಾರ, ಕಾದಂಬರಿಕಾರ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ. ರಾಜನಾರಾಯಣ್ ಅವರು(98) ಸೋಮವಾರ ರಾತ್ರಿ ನಿಧನರಾದರು’ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಕಿ ರಾ ಎಂದು ಜನಪ್ರಿಯತೆ ಪಡೆದ ಕೆ.ರಾಜನಾರಾಯಣ್ ಅವರು ವಯೋಸಹಜ ಕಾಯಿಲೆಯಿಂದಾಗಿ ಸೋಮವಾರ ರಾತ್ರಿ ಸರ್ಕಾರಿ ನಿವಾಸದಲ್ಲಿ ಕೊನೆ ಉಸಿರೆಳೆದರು.</p>.<p>ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರು ಮಂಗಳವಾರ ಕಿ ರಾ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.</p>.<p>ಈ ವೇಳೆ ಮಾಧ್ಯಮದವರಲ್ಲಿ ಮಾತನಾಡಿದ ಅವರು,‘ರಾಜನಾರಾಯಣ್ ಅವರ ಮನೆಯನ್ನು ಸ್ಮಾರಕ ಗ್ರಂಥಾಲಯವನ್ನಾಗಿ ಪರಿವರ್ತಿಸುವಂತೆ ಅನೇಕ ತಮಿಳು ಬರಹಗಾರರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಕೆ.ರಾಜನಾರಾಯಣ್ ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿರುವ ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು,‘ ಸಾಹಿತ್ಯ ಲೋಕವು ಒಬ್ಬ ಪ್ರಸಿದ್ಧ ಚಿಂತಕ, ಬರಹಗಾರರನ್ನು ಕಳೆದುಕೊಂಡಿದೆ’ ಎಂದಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕೂಡ ಸಂತಾಪ ಸೂಚಿಸಿದ್ದಾರೆ.</p>.<p>1980ರ ದಶಕದಲ್ಲಿ ಪುದುಚೇರಿ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ರಾಜನಾರಾಯಣ್ ಅವರು ಸೇವೆ ಸಲ್ಲಿಸಿದ್ದರು.ಅವರು ಸಣ್ಣ ಕಥೆಗಳು, ಕಾದಂಬರಿಗಳು, ಜಾನಪದ ಮತ್ತು ಪ್ರಬಂಧಗಳಿಗೆ ಪ್ರಖ್ಯಾತಿ ಪಡೆದಿದ್ದರು. 1991ರಲ್ಲಿ ‘ಗೋಪಲ್ಲಪುರತು ಮಕ್ಕಳ್’ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು.</p>.<p>ತಮಿಳುನಾಡಿನ ದಕ್ಷಿಣ ಭಾಗದ ಒಣ ಮತ್ತು ಬಿರುಬಿಸಿಲಿನ ಪ್ರದೇಶ ‘ಕರಿಸಾಲ್ ಭೂಮಿ’ಯ ಜನರು ಮತ್ತು ಅಲ್ಲಿನ ಸಂಸ್ಕೃತಿ ಬಗ್ಗೆ ಕೆ.ರಾಜನಾರಾಯಣ್ ಅವರು ಬಿಂಬಿಸಿದ ಚಿತ್ರಣವು ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೇರಿ:</strong> ‘ತಮಿಳಿನ ಖ್ಯಾತ ಬರಹಗಾರ, ಕಾದಂಬರಿಕಾರ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ. ರಾಜನಾರಾಯಣ್ ಅವರು(98) ಸೋಮವಾರ ರಾತ್ರಿ ನಿಧನರಾದರು’ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<p>ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಕಿ ರಾ ಎಂದು ಜನಪ್ರಿಯತೆ ಪಡೆದ ಕೆ.ರಾಜನಾರಾಯಣ್ ಅವರು ವಯೋಸಹಜ ಕಾಯಿಲೆಯಿಂದಾಗಿ ಸೋಮವಾರ ರಾತ್ರಿ ಸರ್ಕಾರಿ ನಿವಾಸದಲ್ಲಿ ಕೊನೆ ಉಸಿರೆಳೆದರು.</p>.<p>ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರು ಮಂಗಳವಾರ ಕಿ ರಾ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದರು.</p>.<p>ಈ ವೇಳೆ ಮಾಧ್ಯಮದವರಲ್ಲಿ ಮಾತನಾಡಿದ ಅವರು,‘ರಾಜನಾರಾಯಣ್ ಅವರ ಮನೆಯನ್ನು ಸ್ಮಾರಕ ಗ್ರಂಥಾಲಯವನ್ನಾಗಿ ಪರಿವರ್ತಿಸುವಂತೆ ಅನೇಕ ತಮಿಳು ಬರಹಗಾರರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಕೆ.ರಾಜನಾರಾಯಣ್ ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿರುವ ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು,‘ ಸಾಹಿತ್ಯ ಲೋಕವು ಒಬ್ಬ ಪ್ರಸಿದ್ಧ ಚಿಂತಕ, ಬರಹಗಾರರನ್ನು ಕಳೆದುಕೊಂಡಿದೆ’ ಎಂದಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕೂಡ ಸಂತಾಪ ಸೂಚಿಸಿದ್ದಾರೆ.</p>.<p>1980ರ ದಶಕದಲ್ಲಿ ಪುದುಚೇರಿ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ರಾಜನಾರಾಯಣ್ ಅವರು ಸೇವೆ ಸಲ್ಲಿಸಿದ್ದರು.ಅವರು ಸಣ್ಣ ಕಥೆಗಳು, ಕಾದಂಬರಿಗಳು, ಜಾನಪದ ಮತ್ತು ಪ್ರಬಂಧಗಳಿಗೆ ಪ್ರಖ್ಯಾತಿ ಪಡೆದಿದ್ದರು. 1991ರಲ್ಲಿ ‘ಗೋಪಲ್ಲಪುರತು ಮಕ್ಕಳ್’ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು.</p>.<p>ತಮಿಳುನಾಡಿನ ದಕ್ಷಿಣ ಭಾಗದ ಒಣ ಮತ್ತು ಬಿರುಬಿಸಿಲಿನ ಪ್ರದೇಶ ‘ಕರಿಸಾಲ್ ಭೂಮಿ’ಯ ಜನರು ಮತ್ತು ಅಲ್ಲಿನ ಸಂಸ್ಕೃತಿ ಬಗ್ಗೆ ಕೆ.ರಾಜನಾರಾಯಣ್ ಅವರು ಬಿಂಬಿಸಿದ ಚಿತ್ರಣವು ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>