ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರೇಣುಕಾ ಚೌಧರಿ ನಿರ್ಧಾರ

Last Updated 24 ಮಾರ್ಚ್ 2023, 10:32 IST
ಅಕ್ಷರ ಗಾತ್ರ

ನವದೆಹಲಿ: 2018ರಲ್ಲಿ ಸಂಸತ್ತಿನಲ್ಲಿ ಮೋದಿ ತಮ್ಮನ್ನು ಅವಮಾನಿಸಿದ್ದಾರೆ. ಆದ್ದರಿಂದ ಅವರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದ ನಂತರ, ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದ್ದಾರೆ.

2018ರಲ್ಲಿ ಸಂಸತ್ತಿನಲ್ಲಿ ಮೋದಿ, ತಮ್ಮ ನಗುವನ್ನು ಹಿಂದೂ ಪುರಾಣದಲ್ಲಿ ಬರುವ ರಾಕ್ಷಸಿ ಪಾತ್ರವಾದ 'ಶೂರ್ಪನಖಿ'ಕ್ಕೆ ಹೋಲಿಸಿದ್ದಾರೆ ಎಂದು ಅವರು ಆರೋಪಿಸಿದರು. ಚೌಧರಿ ಟ್ವಿಟರ್‌ನಲ್ಲಿ ಸದನದ ಕಲಾಪಗಳ ವಿಡಿಯೊವನ್ನು ಸಹ ಶುಕ್ರವಾರ ಪೋಸ್ಟ್ ಮಾಡಿದ್ದಾರೆ.

ವಿಡಿಯೊದಲ್ಲಿ, ಸಭಾಪತಿಯನ್ನುದ್ದೇಶಿಸಿ ಮಾತನಾಡುವಾಗ ಮೋದಿ, ‘ರೇಣುಕಾ ಜೀ ಅವರಿಗೆ ಏನನ್ನೂ ಹೇಳಬೇಡಿ ಎಂದು ನಾನು ವಿನಂತಿಸಿಕೊಳ್ಳುತ್ತೇನೆ. ಏಕೆಂದರೆ ರಾಮಾಯಣ ಧಾರಾವಾಹಿಯ ನಂತರ ಇಂದು ಅಂತಹ ನಗುವನ್ನು ಕೇಳಲು ನಾನು ಅದೃಷ್ಟಶಾಲಿಯಾಗಿದ್ದೇನೆ’ ಎಂದು ಹೇಳಿದ್ದಾರೆ.

ಮೋದಿ ಭಾಷಣದ ವೇಳೆ ಚೌಧರಿಯ ನಗು ಕೇಳಿದ ಬಳಿಕ ಸಭಾಪತಿ ಚೌಧರಿಯವರಿಗೆ ಮೌನವಾಗಿರುವಂತೆ ಸೂಚಿಸಿದ್ದರು.

ನಾನು ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈಗ ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ ಎಂದು ಚೌಧರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT