ಈ ಕುರಿತು ಸೋಮವಾರ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಕೇಂದ್ರ ಸರ್ಕಾರಕ್ಕೆ ನವೆಂಬರ್ 26 ರವರೆಗೆ ಸಮಯ ನೀಡಿದ್ದೇವೆ. ನಂತರ ನವೆಂಬರ್ 27 ರಿಂದ, ರೈತರು ಹಳ್ಳಿಗಳಿಂದ ಟ್ರ್ಯಾಕ್ಟರ್ಗಳ ಮೂಲಕ ದೆಹಲಿಯ ಗಡಿ ಭಾಗಗಳಲ್ಲಿ ನಡೆಯುತ್ತಿರುವ ಚಳವಳಿಯ ಸ್ಥಳವನ್ನು ತಲುಪಲಿದ್ದಾರೆ. ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಟೆಂಟ್ಗಳನ್ನು ಹಾಕಿ, ಬಲವಾದ ಕೋಟೆಯನ್ನೇ ನಿರ್ಮಿಸಲಿದ್ದಾರೆ‘ ಎಂದು ಹೇಳಿದ್ದಾರೆ.