‘ಕೇಂದ್ರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಿ, ಸಂಸತ್ತಿನಲ್ಲಿ ಮೂರು ಕೃಷಿ ಮಸೂದೆಗಳನ್ನು ಅಂಗೀಕರಿಸಿತ್ತು. ಅಲ್ಲದೆ ಕೇಂದ್ರವು ರೈತರ ಪ್ರತಿಭಟನೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿತ್ತು. ಪ್ರತಿಭಟನಾ ಸ್ಥಳದಲ್ಲಿ ನೀರು ಮತ್ತು ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಿತ್ತು. ಪ್ರತಿಭಟನನಿರತ ರೈತರಿಗೆ ಖಲಿಸ್ತಾನಿಗಳು, ಪಾಕಿಸ್ತಾನಿಗಳು ಮತ್ತು ಭಯೋತ್ಪಾದಕರು ಎಂದೆಲ್ಲ ಹಣೆಪಟ್ಟಿ ಕಟ್ಟಿತ್ತು’ ಎಂದು ಸೇನಾ ದೂರಿದೆ.