<p><strong>ಪುಣೆ: </strong>‘ಚೀನಾದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ. ಆದರೆ, ಅತ್ಯಧಿಕ ಜನರಿಗೆ ಭಾರತದಲ್ಲಿ ಕೋವಿಡ್ ಲಸಿಕೆ ಹಾಕಿರುವ ಕಾರಣ ಆತಂಕಪಡುವ ಅಗತ್ಯ ಇಲ್ಲ’ ಎಂದು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ಸಿಇಒ ಅದಾರ್ ಪೂನಾವಾಲಾ ಹೇಳಿದ್ದಾರೆ.</p>.<p>ಚೀನಾ, ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೊರೊನಾ ಸೋಂಕು ದೃಢಪಟ್ಟ ಮಾದರಿಗಳನ್ನು ವೈರಾಣು ಸಂರಚನೆ ವಿಶ್ಲೇಷಣೆಗೆ (ಜಿನೋಮ್ ಸೀಕ್ವೆನ್ಸಿಂಗ್) ಒತ್ತು ನೀಡುವಂತೆ ಕೇಂದ್ರ ಆರೋಗ್ಯ ಸಚಿವರು ಎಲ್ಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ, ಪೂನಾವಾಲಾ ಅವರು ಈ ಟ್ವೀಟ್ ಮಾಡಿದ್ದಾರೆ.</p>.<p>‘ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಕೋವಿಡ್ ಪ್ರಸರಣ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು’ ಎಂದೂ ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p class="Briefhead"><strong>ಕಾರ್ಯಪಡೆ ಅಥವಾ ಸಮಿತಿ ರಚನೆ: ಫಡಣವೀಸ್</strong></p>.<p>ನಾಗ್ಪುರ: ‘ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳ ಕುರಿತು ಅಧ್ಯಯನಕ್ಕಾಗಿ ಕಾರ್ಯಪಡೆ ಇಲ್ಲವೇ ಸಮಿತಿಯೊಂದನ್ನು ರಚಿಸಲಾಗುತ್ತದೆ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ವಿಧಾನಸಭೆಯಲ್ಲಿ ಬುಧವಾರ ಹೇಳಿದ್ದಾರೆ.</p>.<p>ಚೀನಾ, ಜಪಾನ್ದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ವಿರೋಧ ಪಕ್ಷ ನಾಯಕ ಅಜಿತ್ ಪವಾರ್ ಅವರ ಪ್ರಸ್ತಾಪಿಸಿದಾಗ, ಫಡಣವೀಸ್ ಅವರು ಈ ವಿಷಯ ಪ್ರಕಟಿಸಿದರು.</p>.<p>‘ಚೀನಾದಲ್ಲಿ ಕೊರೊನಾ ವೈರಸ್ನ ಹೊಸ ತಳಿಗಳ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಅಧ್ಯಯನಕ್ಕೆ ಏನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಪವಾರ್ ಪ್ರಶ್ನಿಸಿದರು.</p>.<p>‘ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಾಗುತ್ತದೆ’ ಎಂದು ಫಡಣವೀಸ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ: </strong>‘ಚೀನಾದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ. ಆದರೆ, ಅತ್ಯಧಿಕ ಜನರಿಗೆ ಭಾರತದಲ್ಲಿ ಕೋವಿಡ್ ಲಸಿಕೆ ಹಾಕಿರುವ ಕಾರಣ ಆತಂಕಪಡುವ ಅಗತ್ಯ ಇಲ್ಲ’ ಎಂದು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ಐಐ) ಸಿಇಒ ಅದಾರ್ ಪೂನಾವಾಲಾ ಹೇಳಿದ್ದಾರೆ.</p>.<p>ಚೀನಾ, ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೊರೊನಾ ಸೋಂಕು ದೃಢಪಟ್ಟ ಮಾದರಿಗಳನ್ನು ವೈರಾಣು ಸಂರಚನೆ ವಿಶ್ಲೇಷಣೆಗೆ (ಜಿನೋಮ್ ಸೀಕ್ವೆನ್ಸಿಂಗ್) ಒತ್ತು ನೀಡುವಂತೆ ಕೇಂದ್ರ ಆರೋಗ್ಯ ಸಚಿವರು ಎಲ್ಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ, ಪೂನಾವಾಲಾ ಅವರು ಈ ಟ್ವೀಟ್ ಮಾಡಿದ್ದಾರೆ.</p>.<p>‘ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಕೋವಿಡ್ ಪ್ರಸರಣ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು’ ಎಂದೂ ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.</p>.<p class="Briefhead"><strong>ಕಾರ್ಯಪಡೆ ಅಥವಾ ಸಮಿತಿ ರಚನೆ: ಫಡಣವೀಸ್</strong></p>.<p>ನಾಗ್ಪುರ: ‘ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳ ಕುರಿತು ಅಧ್ಯಯನಕ್ಕಾಗಿ ಕಾರ್ಯಪಡೆ ಇಲ್ಲವೇ ಸಮಿತಿಯೊಂದನ್ನು ರಚಿಸಲಾಗುತ್ತದೆ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ವಿಧಾನಸಭೆಯಲ್ಲಿ ಬುಧವಾರ ಹೇಳಿದ್ದಾರೆ.</p>.<p>ಚೀನಾ, ಜಪಾನ್ದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ವಿರೋಧ ಪಕ್ಷ ನಾಯಕ ಅಜಿತ್ ಪವಾರ್ ಅವರ ಪ್ರಸ್ತಾಪಿಸಿದಾಗ, ಫಡಣವೀಸ್ ಅವರು ಈ ವಿಷಯ ಪ್ರಕಟಿಸಿದರು.</p>.<p>‘ಚೀನಾದಲ್ಲಿ ಕೊರೊನಾ ವೈರಸ್ನ ಹೊಸ ತಳಿಗಳ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಅಧ್ಯಯನಕ್ಕೆ ಏನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಪವಾರ್ ಪ್ರಶ್ನಿಸಿದರು.</p>.<p>‘ಪರಿಸ್ಥಿತಿ ಮೇಲೆ ನಿಗಾ ಇಡಲಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಾಗುತ್ತದೆ’ ಎಂದು ಫಡಣವೀಸ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>