ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ದೆಹಲಿಯಲ್ಲಿ ವೈಮಾನಿಕ ಸಾಧನಗಳ ಹಾರಾಟ ನಿಷೇಧ

ಜ.20ರಿಂದ ಫೆ.15ರ ವರೆಗೆ ನಿಷೇಧ ಜಾರಿಗೊಳಿಸಿ ಆದೇಶ
Last Updated 18 ಜನವರಿ 2022, 11:13 IST
ಅಕ್ಷರ ಗಾತ್ರ

ನವದೆಹಲಿ: ಗಣರಾಜ್ಯೋತ್ಸವ ಕಾರಣದಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಜ.20ರಿಂದ ‘ಮಾನವ ರಹಿತ ವೈಮಾನಿಕ ವಾಹನಗಳು’ (ಯುಎವಿ), ಪ್ಯಾರಾಗ್ಲೈಡರ್ಸ್‌ ಹಾಗೂ ಹಾಟ್‌ ಏರ್‌ ಬಲೂನ್‌ಗಳಂತಹ ವೈಮಾನಿಕ ಸಾಧನಗಳ ಹಾರಾಟ ನಡೆಸುವುದನ್ನು ನಿರ್ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ರಾಕೇಶ್‌ ಅಸ್ಥಾನಾ ಅವರು ಈ ಸಂಬಂಧ ಹೊರಡಿಸಿರುವ ಆದೇಶ ಫೆಬ್ರುವರಿ 15ರ ವರೆಗೆ ಜಾರಿಯಲ್ಲಿರುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಕೆಲ ದುಷ್ಕರ್ಮಿಗಳು, ಸಮಾಜಘಾತುಕ ಶಕ್ತಿಗಳು ಅಥವಾ ಉಗ್ರರಿಂದ ದಾಳಿಯ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರು, ಗಣ್ಯರು ಹಾಗೂ ಆಸ್ತಿಗಳ ಸುರಕ್ಷತೆಗೆ ಅಪಾಯವಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT