ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, 'ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ನಾವೆಲ್ಲರೂ ಶಾಂತಿಯುತ ಬೆಂಬಲ ನೀಡಬೇಕಿದೆ' ಎಂದು ಮನವಿ ಮಾಡಿದ್ದಾರೆ.