ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರದ ವಿರುದ್ಧ ದೆಹಲಿ ಪೊಲೀಸರ ಪ್ರತಿಭಟನೆ

Last Updated 30 ಜನವರಿ 2021, 10:54 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 26 ಗಣರಾಜ್ಯೋತ್ಸವದ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರವನ್ನು ಖಂಡಿಸಿ ದೆಹಲಿ ಪೊಲೀಸ್ ಮಹಾಸಂಘದ ನೇತೃತ್ವದಲ್ಲಿ ಗಾಯಗೊಂಡ ಪೊಲೀಸರು ಹಾಗೂ ಕುಟುಂಬ ಸದಸ್ಯರು ಶನಿವಾರದಂದು ಶಾಹೀದಿ ಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯಲ್ಲಿ ದೆಹಲಿ ಪೊಲೀಸ್‌ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ನನ್ನನ್ನು ಕೆಂಪುಕೋಟೆಯ ಗೇಟ್ ಬಳಿ ನಿಯೋಜಿಸಲಾಗಿತ್ತು. ಕೆಂಪುಕೋಟೆಯಲ್ಲಿ ಧ್ವಜವನ್ನು ಹಾರಿಸಿದ ಗುಂಪನ್ನು ಹೊರ ತರುವ ಪ್ರಯತ್ನ ಮಾಡುತ್ತಿದ್ದೆವು. ಇದ್ದಕ್ಕಿದ್ದಂತೆ ನಮ್ಮ ಮೇಲೆ ದಾಳಿ ನಡೆಸಿದರು. ಖಡ್ಗ ಹಾಗೂ ಕೋಲುಗಳು ಅವರ ಬಳಿಯಿದ್ದವು. ನನ್ನ ತಲೆ ಹಾಗೂ ಕಾಲಿಗೆ ಗಾಯವಾಗಿದೆ ಎಂದು ದೆಹಲಿ ಪೊಲೀಸ್ ಪೇದೆ ಅಶೋಕ್ ಕುಮಾರ್, ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದರು.

ಪೂರ್ವ ಯೋಜಿತ ಹಾದಿಯನ್ನು ಮುರಿದ ಪ್ರತಿಭಟನಾ ನಿರತ ರೈತರು ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿ ದಾಂಧಲೆ ನಡೆಸಿ, ಧಾರ್ಮಿಕ ಹಾಗೂ ರೈತ ಸಂಘಟನೆಯ ಧ್ವಜವನ್ನು ಹಾರಿಸಿದ್ದರು.

ಘಟನೆಯಲ್ಲಿ 400ರಷ್ಟು ಪೊಲೀಸರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸರನ್ನು ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಯ 12 ನಾಯಕರಿಗೆ ದೆಹಲಿ ಪೊಲೀಸ್ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT