ನವದೆಹಲಿ: ಗಣರಾಜ್ಯೋತ್ಸವ ದಿನ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜನರ ದಾರಿ ತಪ್ಪಿಸುವಂಥ ಟ್ವೀಟ್ ಮಾಡಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್, ಹಿರಿಯ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಪತ್ರಕರ್ತರಾದ ಮೃಣಾಲ್ ಪಾಂಡೆ, ಜಫರ್ ಆಘಾ, ಪರೇಶ್ ನಾಥ್ ಹಾಗೂ ಅನಂತನಾಥ್ ಅವರು ಸಹ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.