ಪ್ರಜೆಗಳ ಕೈಯಲ್ಲಿ ಭಾರತದ ಭವಿಷ್ಯ: ರಾಹುಲ್ ಗಾಂಧಿ

ನವದೆಹಲಿ: ಭಾರತದ ಭವಿಷ್ಯ ಪ್ರಜೆಗಳ ಕೈಯಲ್ಲಿದೆ. ಅದು ‘ಸತ್ಯಾಗ್ರಹಿ’ ರೈತರೇ ಆಗಿರಲಿ ಅಥವಾ ಕಾರ್ಮಿಕರು, ದೊಡ್ಡ, ಮಧ್ಯಮ ಮತ್ತು ಸಣ್ಣ ಉದ್ಯಮಿಗಳು, ಉದ್ಯೋಗಾಕಾಂಕ್ಷಿಗಳು ಮತ್ತು ಹಣದುಬ್ಬರ ಎದುರಿಸುತ್ತಿರುವ ಗೃಹಿಣಿಯರೇ ಆಗಿರಬಹುದು ಎಂದು ರಾಹುಲ್ ಗಾಂಧಿ ಅವರು ಹೇಳಿದರು.
72ನೇ ಗಣರಾಜ್ಯೋತ್ಸವದ ಶುಭಕೋರಿದ ಅವರು, ‘ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಹೋರಾಡಿದವರನ್ನು ಮರೆಯಬಾರದು. ಗಣರಾಜೋತ್ಸವದ ದಿನವಾದ ಇಂದು ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವವನ್ನು ನವೀಕರಿಸುವುದಾಗಿ ಪ್ರತಿಜ್ಞೆ ಮಾಡೋಣ. ಜೈ ಹಿಂದ್’ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರೂ ಶುಭಕೋರಿ ಟ್ವೀಟ್ ಮಾಡಿದ್ದಾರೆ.
भारत का प्रत्येक नागरिक देश का भाग्य विधाता है चाहे वो सत्याग्रही किसान-मज़दूर हो या लघु-मध्यम व्यापारी, नौकरी तलाश करता युवा हो या महँगाई से परेशान गृहणी।
गणतंत्र आपसे है, गणतंत्र आपका है।
शुभकामनाएँ!#RepublicDay pic.twitter.com/ULRcTiiuMn
— Rahul Gandhi (@RahulGandhi) January 26, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.