ಟಿಆರ್ಪಿ ಹಗರಣದಲ್ಲಿ ಜಾಮೀನು ನೀಡುವಂತೆ ದಾಸ್ಗುಪ್ತಾ ಸಲ್ಲಿಸಿದ್ದ ಮನವಿಯನ್ನು ಸೆಷನ್ಸ್ ಕೋರ್ಟ್ ತಿರಸ್ಕರಿಸಿತ್ತು. ಹಗರಣದಲ್ಲಿ ಪ್ರಮುಖ ಪಾತ್ರವಹಿಸಿರಬಹುದು ಎಂಬ ಅಂಶವನ್ನು ಉಲ್ಲೇಖಿಸಿತ್ತು. ಕಳೆದ ವರ್ಷ ಡಿಸೆಂಬರ್ 24 ಅವರನ್ನು ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದರು. ಅಂದಿನಿಂದ ಜೈಲಿನಲ್ಲಿದ್ದು, ಜನವರಿಯಲ್ಲಿ ಜಾಮೀನು ಕೋರಿ ಹೈ ಕೋರ್ಟ್ ಮೊರೆ ಹೋಗಿದ್ದರು.